ಚಿಕ್ಕಮಗಳೂರು: ಅನಿಲ ದರ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆ ಕುರಿತು ರಾಜ್ಯಾದ್ಯಂತ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿಟಿ ರವಿ ನೇತೃತ್ವದಲ್ಲಿ ಬಿಜೆಪಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನೇ ನೀತಿ ಮಾಡಿಕೊಂಡಿದೆ. ತೈಲ ದರ ಏರಿಕೆಯಾದರೇ ಬೆಲೆ ಏರಿಕೆಗೆ ಲೈಸೆನ್ಸ್ ಕೊಟ್ಟಂತೆ. ಆ ಮೂಲಕ ಕಷ್ಟದಲ್ಲಿರುವ ಜನರಿಗೆ ದರ ಏರಿಕೆಯ ಬರೆ ಹಾಕಿದೆ ಎಂದು ಕಿಡಿಕಾರಿದರು.
ಮೋದಿ ಬೆಲೆ ಏರಿಕೆ ಮಾಡಿದಾಗ ಸಿಎಂ ಸಿದ್ದರಾಮಯ್ಯ ಬೈಕ್ ಹೊತ್ತು ಶವದ ಅಣುಕು ಯಾತ್ರೆ ಮಾಡಿದ್ದರು. ಈಗ ನಾವು ಏನು ಮಾಡಬೇಕು ಹೇಳಿ. ಜನ ವಿರೋಧಿ, ಸತ್ತು ಹೋಗಿರುವ ನಿಮ್ಮ ಸರ್ಕಾರವನ್ನೇ ಹೊತ್ತು ಹೊಗಬೇಕು. ಜನರೇ ಈ ಕಾಂಗ್ರೆಸ್ ಸರ್ಕಾರವನ್ನು ದಫನ್ ಮಾಡುವ ದಿನ ಬರುತ್ತೆ ಎಂದು ವಾಗ್ದಾಳಿ ನಡಸಿದರು.
ಕಾಂಗ್ರೆಸ್ಗೆ ಲೋಕಸಭಾ ಚುನಾವಣೆಯ ಸೋಲಿನ ಕಹಿಯನ್ನು ರಾಜಕೀಯ ಪಕ್ಷ, ಮುಖಂಡರ ಮೇಲೆ ತೀರಿಸಿಕೊಂಡರು. ಇದಾದ ಬಳಿಕ ಈಗ ಜನ ಸಾಮಾನ್ಯರ ಮೇಲೆ ತೀರಿಸಕೊಳ್ಳಲು ಮುಂದಾಗಿದ್ದಾರೆ.
ಜನರಿಗಾಗಿ ಏನು ಕಾರ್ಯಕ್ರಮ ನೀಡದ ಕಾಂಗ್ರೆಸ್, ಕೇವಲ ಜನರಿಂದ ಲೂಟಿ ಬೆಲೆ ಏರಿಕೆ ಮಾತ್ರ ಮಾಡಿದ್ದಾರೆ. ಕಾಂಗ್ರೆಸ್ದು ಓಲೈಕೆ ರಾಜಕಾರಣ ಎಂಬುದನ್ನು ತೋರಿಸಿಕೊಟ್ಟಿದೆ. ಆ ಮೂಲಕ ಜನ ವಿರೋಧಿ ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಸಿಟಿ ರವಿ ವ್ಯಂಗ್ಯವಾಡಿದರು.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…