ಚಿಕ್ಕಮಗಳೂರು: ಅನಿಲ ದರ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆ ಕುರಿತು ರಾಜ್ಯಾದ್ಯಂತ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿಟಿ ರವಿ ನೇತೃತ್ವದಲ್ಲಿ ಬಿಜೆಪಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನೇ ನೀತಿ ಮಾಡಿಕೊಂಡಿದೆ. ತೈಲ ದರ ಏರಿಕೆಯಾದರೇ ಬೆಲೆ ಏರಿಕೆಗೆ ಲೈಸೆನ್ಸ್ ಕೊಟ್ಟಂತೆ. ಆ ಮೂಲಕ ಕಷ್ಟದಲ್ಲಿರುವ ಜನರಿಗೆ ದರ ಏರಿಕೆಯ ಬರೆ ಹಾಕಿದೆ ಎಂದು ಕಿಡಿಕಾರಿದರು.
ಮೋದಿ ಬೆಲೆ ಏರಿಕೆ ಮಾಡಿದಾಗ ಸಿಎಂ ಸಿದ್ದರಾಮಯ್ಯ ಬೈಕ್ ಹೊತ್ತು ಶವದ ಅಣುಕು ಯಾತ್ರೆ ಮಾಡಿದ್ದರು. ಈಗ ನಾವು ಏನು ಮಾಡಬೇಕು ಹೇಳಿ. ಜನ ವಿರೋಧಿ, ಸತ್ತು ಹೋಗಿರುವ ನಿಮ್ಮ ಸರ್ಕಾರವನ್ನೇ ಹೊತ್ತು ಹೊಗಬೇಕು. ಜನರೇ ಈ ಕಾಂಗ್ರೆಸ್ ಸರ್ಕಾರವನ್ನು ದಫನ್ ಮಾಡುವ ದಿನ ಬರುತ್ತೆ ಎಂದು ವಾಗ್ದಾಳಿ ನಡಸಿದರು.
ಕಾಂಗ್ರೆಸ್ಗೆ ಲೋಕಸಭಾ ಚುನಾವಣೆಯ ಸೋಲಿನ ಕಹಿಯನ್ನು ರಾಜಕೀಯ ಪಕ್ಷ, ಮುಖಂಡರ ಮೇಲೆ ತೀರಿಸಿಕೊಂಡರು. ಇದಾದ ಬಳಿಕ ಈಗ ಜನ ಸಾಮಾನ್ಯರ ಮೇಲೆ ತೀರಿಸಕೊಳ್ಳಲು ಮುಂದಾಗಿದ್ದಾರೆ.
ಜನರಿಗಾಗಿ ಏನು ಕಾರ್ಯಕ್ರಮ ನೀಡದ ಕಾಂಗ್ರೆಸ್, ಕೇವಲ ಜನರಿಂದ ಲೂಟಿ ಬೆಲೆ ಏರಿಕೆ ಮಾತ್ರ ಮಾಡಿದ್ದಾರೆ. ಕಾಂಗ್ರೆಸ್ದು ಓಲೈಕೆ ರಾಜಕಾರಣ ಎಂಬುದನ್ನು ತೋರಿಸಿಕೊಟ್ಟಿದೆ. ಆ ಮೂಲಕ ಜನ ವಿರೋಧಿ ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಸಿಟಿ ರವಿ ವ್ಯಂಗ್ಯವಾಡಿದರು.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…