ಚಿಕ್ಕಮಗಳೂರು: ಅನಿಲ ದರ ಏರಿಕೆ ಮಾಡಿರುವ ಕಾಂಗ್ರೆಸ್ ಸರ್ಕಾರದ ನಡೆ ಕುರಿತು ರಾಜ್ಯಾದ್ಯಂತ ಸಾರ್ವಜನಿಕರು ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಇತ್ತ ಚಿಕ್ಕಮಗಳೂರಿನಲ್ಲಿ ಮಾಜಿ ಶಾಸಕ ಸಿಟಿ ರವಿ ನೇತೃತ್ವದಲ್ಲಿ ಬಿಜೆಪಿ ಕೂಡಾ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನೇ ನೀತಿ ಮಾಡಿಕೊಂಡಿದೆ. ತೈಲ ದರ ಏರಿಕೆಯಾದರೇ ಬೆಲೆ ಏರಿಕೆಗೆ ಲೈಸೆನ್ಸ್ ಕೊಟ್ಟಂತೆ. ಆ ಮೂಲಕ ಕಷ್ಟದಲ್ಲಿರುವ ಜನರಿಗೆ ದರ ಏರಿಕೆಯ ಬರೆ ಹಾಕಿದೆ ಎಂದು ಕಿಡಿಕಾರಿದರು.
ಮೋದಿ ಬೆಲೆ ಏರಿಕೆ ಮಾಡಿದಾಗ ಸಿಎಂ ಸಿದ್ದರಾಮಯ್ಯ ಬೈಕ್ ಹೊತ್ತು ಶವದ ಅಣುಕು ಯಾತ್ರೆ ಮಾಡಿದ್ದರು. ಈಗ ನಾವು ಏನು ಮಾಡಬೇಕು ಹೇಳಿ. ಜನ ವಿರೋಧಿ, ಸತ್ತು ಹೋಗಿರುವ ನಿಮ್ಮ ಸರ್ಕಾರವನ್ನೇ ಹೊತ್ತು ಹೊಗಬೇಕು. ಜನರೇ ಈ ಕಾಂಗ್ರೆಸ್ ಸರ್ಕಾರವನ್ನು ದಫನ್ ಮಾಡುವ ದಿನ ಬರುತ್ತೆ ಎಂದು ವಾಗ್ದಾಳಿ ನಡಸಿದರು.
ಕಾಂಗ್ರೆಸ್ಗೆ ಲೋಕಸಭಾ ಚುನಾವಣೆಯ ಸೋಲಿನ ಕಹಿಯನ್ನು ರಾಜಕೀಯ ಪಕ್ಷ, ಮುಖಂಡರ ಮೇಲೆ ತೀರಿಸಿಕೊಂಡರು. ಇದಾದ ಬಳಿಕ ಈಗ ಜನ ಸಾಮಾನ್ಯರ ಮೇಲೆ ತೀರಿಸಕೊಳ್ಳಲು ಮುಂದಾಗಿದ್ದಾರೆ.
ಜನರಿಗಾಗಿ ಏನು ಕಾರ್ಯಕ್ರಮ ನೀಡದ ಕಾಂಗ್ರೆಸ್, ಕೇವಲ ಜನರಿಂದ ಲೂಟಿ ಬೆಲೆ ಏರಿಕೆ ಮಾತ್ರ ಮಾಡಿದ್ದಾರೆ. ಕಾಂಗ್ರೆಸ್ದು ಓಲೈಕೆ ರಾಜಕಾರಣ ಎಂಬುದನ್ನು ತೋರಿಸಿಕೊಟ್ಟಿದೆ. ಆ ಮೂಲಕ ಜನ ವಿರೋಧಿ ಸರ್ಕಾರವಾಗಿ ಹೊರಹೊಮ್ಮಿದೆ ಎಂದು ಸಿಟಿ ರವಿ ವ್ಯಂಗ್ಯವಾಡಿದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…