ಬೆಂಗಳೂರು : ಮುಡಾ ಹಗರಣವನ್ನು ಸಿಬಿಐಗೆ ಯಾಕೆ ಕೊಡಬೇಕು..? ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿ ನಾಯಕರಿಗೆ ಇದಿಯಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿರುವ ಆರೋಪದ ತನಿಖೆಯನ್ನ ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ಒತ್ತಾಯ ಮಾಡುತ್ತಿರುವ ವಿಚಾರಕ್ಕೆ ನಗರದ ಕಂಠೀರವ ಕ್ರೀಡಾಂಗಣ ಬಳಿ ಮಾತನಾಡಿದ ಸಿಎಂ,ಪ್ರಕರಣದ ತಬಿಖೆಯನ್ನ ಸಿಬಿಐಗೆ ನೀಡಬೇಕು ಎಂದು ಹೇಳಲು ಬಿಜೆಪಿಗೆ ಯಾವ ನೈತಿಕತೆ ಇದೆ. ಪ್ರಕರಣದ ತನಿಖೆಯನ್ನ ನಡೆಸಲು ಹಿರಿಯ ಐಎಎಸ್ ಅಧಿಕಾರಿಯೊಬ್ಬರಿಗೆ ಸೂಚಿಸಲಾಗಿದೆ. ಬಿಜೆಪಿ ಅವರು ಹೇಳ್ತಾರೆ ಎಂತ ನೀವು ಮಾಧ್ಯಮದವರು ಹೇಳ್ಬೇಡಿ. ಸಿಬಿಐ ಗೆ ಕೊಡುವ ಅವಶ್ಯಕತೆ ಇದಿಯಾ ಅಂತ ಯೋಚಿಸಿ, ನಮ್ಮ ಜಮೀನು ಸ್ವಾಧೀನ ಪಡಿಸಿಕೊಂಡಿದ್ದಾರೆ. ಸ್ವಾಧೀನ ಪಡಿಸಿಕೊಂಡ ಜಮೀನಿನಲ್ಲಿ ೫೦:೫೦ ಅನುಪಾತದಲ್ಲಿ ಸೈಟು ಹಂಚಿಕೆಯಾಗಬೇಕು ಎಂದು ಯಾವ ಸರ್ಕಾರ ಕಾನೂನು ರೂಪಿಸಿತ್ತು ಎಂದು ಪ್ರಶ್ನೆ ಮಾಡಿದರು.
ಅಲ್ಲದೆ ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ಈಗಾಗಲೇ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತನಿಖೆಗೆ ಆದೇಶ ನೀಡಲಾಗಿದೆ. ವಿವಾದಕ್ಕೀಡಾಗಿರುವ ಸೈಟ್ ಗಳನ್ನ ಅಮಾನತ್ತಿಲ್ಲಿಡಲಾಗಿದೆ ಮತ್ತು ಸೈಟು ಹಂಚಿಕೆಯಾದಾಗ ಮುಡಾದಲ್ಲಿದ್ದ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…