ರಾಜ್ಯ

ಪಾಕ್‌ ಜೊತೆ ಮ್ಯಾಚ್‌ ಆಡಿದ ಬಗ್ಗೆ ಬಿಜೆಪಿ ನಾಯಕರು ಮಾತಾಡಲಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಪಾಕಿಸ್ತಾನ, ಮುಸಲ್ಮಾನ ವಿಷಯಗಳು ಇಲ್ಲವೆಂದರೆ ಬಿಜೆಪಿಯವರಿಗೆ ರಾಜಕೀಯ ವ್ಯವಹಾರವೇ ಇಲ್ಲ. ಈ ವಿಷಯಗಳೇ ಬಿಜೆಪಿಯವರಿಗೆ ಜೀವಾಳ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ ದಾಳಿಯಾದಾಗ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಜೋರು ಭಾಷಣ ಮಾಡಿ, ನೀರು ಮತ್ತು ರಕ್ತ ಏಕಕಾಲಕ್ಕೆ ಹರಿಯಲು ಸಾಧ್ಯವಿಲ್ಲ ಎಂದಿದ್ದರು. ಈಗ ಪಾಕಿಸ್ತಾನದ ಜೊತೆ ಕ್ರಿಕೆಟ್‌ ಆಡುತ್ತಿದ್ದಾರೆ. ಇದನ್ನು ಬಿಜೆಪಿಯವರು ಏಕೆ ಪ್ರಶ್ನಿಸುತ್ತಿಲ್ಲ ಎಂದು ಕಿಡಿಕಾರಿದ್ದರು.

ಇದನ್ನು ಓದಿ: ಉತ್ತರಾಖಂಡ್‌ನಲ್ಲಿ ಭೀಕರ ಪ್ರವಾಹ: ತಗ್ಗು ಪ್ರದೇಶಗಳು ಸಂಪೂರ್ಣ ಮುಳುಗಡೆ

ಬಿಜೆಪಿಯವರಿಗೆ ನಾಚಿಕೆ, ಮಾನಮರ್ಯಾದೆ ಏನೂ ಇಲ್ಲ. ಪಾಕಿಸ್ತಾನದ ಜೊತೆಗಿನ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ನಿಲ್ಲಿಸಿಬಿಡುತ್ತೇವೆ, ಪಾಕಿಸ್ತಾನವನ್ನು ಮುಗಿಸಿ ಬಿಡುತ್ತೇವೆ, ಹಾಗೇ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದೆಲ್ಲಾ ಹೇಳಿದವರು ಇವತ್ತು ಮಾಡುತ್ತಿರುವುದು ಏನು? ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರ ಪುತ್ರ ಜೈ ಷಾ ಅವರ ಅಧ್ಯಕ್ಷತೆಯಲ್ಲಿರುವ ಭಾರತೀಯ ಕ್ರಿಕೆಟ್‌ ಮಂಡಳಿ ಪಾಕಿಸ್ತಾನದ ಜೊತೆ ನಮ್ಮ ತಂಡ ಆಟವಾಡಲು ಅವಕಾಶ ನೀಡಿದೆ. ಇದನ್ನು ಯಾಕೆ ಬಿಜೆಪಿಯವರು ವಿರೋಧಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಯವರು ಏನೂ ಮಾಡಿದರೂ ಅದು ಅಂಗೀಕೃತ ಎಂಬಂತೆ ವರ್ತಿಸಲಾಗುತ್ತಿದೆ. ಕಾಂಗ್ರೆಸ್‌‍ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರಲ್ಲಿ ಮುಸಲ್ಮಾನರು ಪಾಕಿಸ್ತಾನ ಎಂಬ ಹುಳುಕು ಹುಡುಕಿ ಟೀಕೆ ಮಾಡುತ್ತಾರೆ. ಇದೇ ಬಿಜೆಪಿಯವರ ಜೀವಾಳ. ಇದನ್ನು ಬಿಟ್ಟರೆ ಅವರಿಗೆ ಬದುಕಿಲ್ಲ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

7 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

7 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

7 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

8 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

8 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

9 hours ago