ರಾಜ್ಯ

ಪಾಕ್‌ ಜೊತೆ ಮ್ಯಾಚ್‌ ಆಡಿದ ಬಗ್ಗೆ ಬಿಜೆಪಿ ನಾಯಕರು ಮಾತಾಡಲಿ: ಸಚಿವ ಸಂತೋಷ್‌ ಲಾಡ್‌

ಬೆಂಗಳೂರು: ಪಾಕಿಸ್ತಾನ, ಮುಸಲ್ಮಾನ ವಿಷಯಗಳು ಇಲ್ಲವೆಂದರೆ ಬಿಜೆಪಿಯವರಿಗೆ ರಾಜಕೀಯ ವ್ಯವಹಾರವೇ ಇಲ್ಲ. ಈ ವಿಷಯಗಳೇ ಬಿಜೆಪಿಯವರಿಗೆ ಜೀವಾಳ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಹಲ್ಗಾಮ್‌ ದಾಳಿಯಾದಾಗ ಪ್ರಧಾನ ಮಂತ್ರಿ ನರೇಂದ್ರಮೋದಿ ಅವರು ಜೋರು ಭಾಷಣ ಮಾಡಿ, ನೀರು ಮತ್ತು ರಕ್ತ ಏಕಕಾಲಕ್ಕೆ ಹರಿಯಲು ಸಾಧ್ಯವಿಲ್ಲ ಎಂದಿದ್ದರು. ಈಗ ಪಾಕಿಸ್ತಾನದ ಜೊತೆ ಕ್ರಿಕೆಟ್‌ ಆಡುತ್ತಿದ್ದಾರೆ. ಇದನ್ನು ಬಿಜೆಪಿಯವರು ಏಕೆ ಪ್ರಶ್ನಿಸುತ್ತಿಲ್ಲ ಎಂದು ಕಿಡಿಕಾರಿದ್ದರು.

ಇದನ್ನು ಓದಿ: ಉತ್ತರಾಖಂಡ್‌ನಲ್ಲಿ ಭೀಕರ ಪ್ರವಾಹ: ತಗ್ಗು ಪ್ರದೇಶಗಳು ಸಂಪೂರ್ಣ ಮುಳುಗಡೆ

ಬಿಜೆಪಿಯವರಿಗೆ ನಾಚಿಕೆ, ಮಾನಮರ್ಯಾದೆ ಏನೂ ಇಲ್ಲ. ಪಾಕಿಸ್ತಾನದ ಜೊತೆಗಿನ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ನಿಲ್ಲಿಸಿಬಿಡುತ್ತೇವೆ, ಪಾಕಿಸ್ತಾನವನ್ನು ಮುಗಿಸಿ ಬಿಡುತ್ತೇವೆ, ಹಾಗೇ ಮಾಡುತ್ತೇವೆ ಹೀಗೆ ಮಾಡುತ್ತೇವೆ ಎಂದೆಲ್ಲಾ ಹೇಳಿದವರು ಇವತ್ತು ಮಾಡುತ್ತಿರುವುದು ಏನು? ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರ ಪುತ್ರ ಜೈ ಷಾ ಅವರ ಅಧ್ಯಕ್ಷತೆಯಲ್ಲಿರುವ ಭಾರತೀಯ ಕ್ರಿಕೆಟ್‌ ಮಂಡಳಿ ಪಾಕಿಸ್ತಾನದ ಜೊತೆ ನಮ್ಮ ತಂಡ ಆಟವಾಡಲು ಅವಕಾಶ ನೀಡಿದೆ. ಇದನ್ನು ಯಾಕೆ ಬಿಜೆಪಿಯವರು ವಿರೋಧಿಸುತ್ತಿಲ್ಲ ಎಂದು ಪ್ರಶ್ನೆ ಮಾಡಿದರು.

ಬಿಜೆಪಿಯವರು ಏನೂ ಮಾಡಿದರೂ ಅದು ಅಂಗೀಕೃತ ಎಂಬಂತೆ ವರ್ತಿಸಲಾಗುತ್ತಿದೆ. ಕಾಂಗ್ರೆಸ್‌‍ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದರಲ್ಲಿ ಮುಸಲ್ಮಾನರು ಪಾಕಿಸ್ತಾನ ಎಂಬ ಹುಳುಕು ಹುಡುಕಿ ಟೀಕೆ ಮಾಡುತ್ತಾರೆ. ಇದೇ ಬಿಜೆಪಿಯವರ ಜೀವಾಳ. ಇದನ್ನು ಬಿಟ್ಟರೆ ಅವರಿಗೆ ಬದುಕಿಲ್ಲ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ಮಲೆನಾಡಿನಲ್ಲಿ ಮಳೆಯ ಅಬ್ಬರ: ಜೋಗ ಜಲಪಾತಕ್ಕೆ ಜೀವಕಳೆ

ಶಿವಮೊಗ್ಗ: ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ ನಾಲ್ಕೈದು ದಿನಗಳಿಂದ ಶಿವಮೊಗ್ಗದಲ್ಲಿ ಭಾರೀ…

7 hours ago

ಕೊಡಗು ಜಿಲ್ಲೆಯ ಮಳೆ ವಿವರ

ಕೊಡಗು: ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಜಿಲ್ಲೆಯ ಮಳೆಯ ವಿವರ ಈ…

7 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026: ಗಜಪಡೆ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಮಡಿಕೇರಿ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಗಜಪಡೆಗೆ ಆಯ್ಕೆ ಪ್ರಕ್ರಿಯೆಗೆ ಅಧಿಕೃತ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ…

8 hours ago

ವಯನಾಡಿನಲ್ಲಿ ಮೇಘಸ್ಫೋಟ: ಇಬ್ಬರು ಕಾರ್ಮಿಕರು ಜೀವಂತ ಸಮಾಧಿ: 30 ಮಂದಿ ನಾಪತ್ತೆ

ತಿರುವನಂತಪುರಂ: ವಯನಾಡಿನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

8 hours ago

ಬ್ರಿಡ್ಜ್‌ ಮ್ಯಾನ್‌ ಖ್ಯಾತಿಯ ಪದ್ಮಶ್ರೀ ಡಾ.ಗಿರೀಶ್‌ ಭಾರದ್ವಾಜ್‌ ನಿಧನ

ಮಂಗಳೂರು: ತೂಗುಸೇತುವೆಗಳ ಸರದಾರ, ಸುಳ್ಯದ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದ ಪದ್ಮಶ್ರೀ ಪುರಸ್ಕೃತ ಎಂಜಿನಿಯರ್‌ ಡಾ.ಗಿರೀಶ್‌ ಭಾರದ್ವಾಜ್‌ ಅವರು ಇಂದು ನಿಧನರಾಗಿದ್ದಾರೆ.…

9 hours ago

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆ

ಕೊಡಗು: ಕಾಫಿ ತೋಟದಲ್ಲಿ ಕಾಡಾನೆ ಮೃತದೇಹ ಪತ್ತೆಯಾಗಿದೆ. ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಲಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪರದಂಡ…

11 hours ago