ಬೆಂಗಳೂರು: ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ವಿವಾದ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಮಧ್ಯೆ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಅಹವಾಲು ಸ್ವೀಕರಿಸುತ್ತಿದ್ದಾರೆ.
ಬೆಂಗಳೂರು ನಗರದಲ್ಲಿಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದ ಬಿಜೆಪಿ ನಾಯಕರು ಮಹಾಲಕ್ಷ್ಮೀ ಲೇಔಟ್ ಹಾಗು ನಂದಿನಿ ಲೇಔಟ್ಗಳಲ್ಲಿರುವ ಬಿಪಿಎಲ್ ಕಾರ್ಡ್ ರದ್ದಾದವರ ನಿವಾಸಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಅಲ್ಲದೇ ಈ ವೇಳೆ ಆರ್.ಅಶೋಕ್ರಿಗೆ ಶಾಸಕರಾದ ಅಶ್ವಥ್ ನಾರಾಯಣ ಹಾಗೂ ಗೋಪಾಲಯ್ಯ ಸಹ ಸಾಥ್ ನೀಡಿ ಕಾರ್ಡ್ ರದ್ದಿನಿಂದ ಆಗಿರುವ ಸಮಸ್ಯೆಗಳ ಬಗ್ಗೆ ಜನರ ಬಳಿ ಅಹವಾಲು ಸ್ವೀಕರಿಸಿದ್ದಾರೆ.
ಇದೇ ವೇಳೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಲಂಚ ತೆಗೆದುಕೊಳ್ಳುವುದಕ್ಕೆ ಬಿಪಿಎಲ್ ಕಾರ್ಡ್ ರದ್ದು ಮಾಡಿದ್ದಾರೆ. ಲಂಚ ನೀಡಿ ಬಡವರಿಗೆ ಕಾರ್ಡ್ಗಳನ್ನು ಕೊಟ್ಟಿದ್ದೀರಾ. ಈಗ ಲಂಚ ಬರುತ್ತಿಲ್ಲವಾ? ಈ ಸರ್ಕಾರದಲ್ಲಿ ಬಡವರ ಬಿಪಿಎಲ್ ಕಾರ್ಡ್ಗಳೂ ಕೂಡ ರದ್ದಾಗುವುದು ಗ್ಯಾರಂಟಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…
ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…
ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…
ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ:…