ಚನ್ನಪಟ್ಟಣ: ಇಲ್ಲಿನ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು.
ಜೆಡಿಎಸ್ ಮುಗಿಸುವುದಕ್ಕಾಗಿಯೇ ಬಿಜೆಪಿಯವರು ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೆಲ್ಲಾ ತಿಳಿದಿರುವ ಕುಮಾರಸ್ವಾಮಿ ಅವರು ವಿಧಿ ಇಲ್ಲದೆ ಅವರೊಂದಿಗೆ ಕೈ ಜೋಡಿಸಿದ್ದಾರೆ ಎಂದು ಟೀಕಿಸಿದರು.
ಭ್ರಷ್ಟಾಚಾರದಿಂದಲೇ ಅಧಿಕಾರ ಕಳೆದುಕೊಂಡ ಬಿಜೆಪಿಯ ಜೊತೆ ಜೆಡಿಎಸ್ ಸೇರಿಕೊಂಡು ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಜನಪರ ಕಾಂಗ್ರೆಸ್ ಸರ್ಕಾರದ ಮೇಲೆ ಹುಸಿ ಆರೋಪಗಳನ್ನು ಹೊರಿಸಿ ಅನೈತಿಕ ಪಾದಯಾತ್ರೆ ಮಾಡುತ್ತಿರುವುದು ಇಬ್ಬರಿಗೂ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಜನರ ಮನವನ್ನು ಗೆದ್ದಿರುವುದನ್ನ ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯಕ್ಕೆ ತಪ್ಪು ಸಂದೇಶ ನೀಡಲು ಹೊರಟಿವೆ. ಆದರೆ ಇಂದಿನ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ನಮಗೆ ದೊರೆತಿರುವ ಸಾರ್ವಜನಿಕರ ಅಭೂತಪೂರ್ವ ಬೆಂಬಲ ಬಿಜೆಪಿಗರ ನಿರೀಕ್ಷೆಯನ್ನು ಹುಸಿಯಾಗಿಸಿದೆ ಎಂದರು.
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…