ರಾಜ್ಯ

ಮತಗಳ್ಳತನದಲ್ಲೂ ಬಿಜೆಪಿಗರು ನಿಸ್ಸೀಮರು : ಸಿಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು : ನರೇಂದ್ರ ಮೋದಿ ಅವರು ಪ್ರಧಾನಿ ಆದ ಬಳಿಕ ಎಲ್ಲಾ ಸಾಂವಿಧಾನಿಕ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ ಮತ್ತು ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ರಾಜ್ಯದಲ್ಲಿ ನಡೆದಿರುವ ಮತಗಳ್ಳತನದ ವ್ಯವಸ್ಥಿತ ಷಡ್ಯಂತ್ರ ಮತ್ತು ವ್ಯವಸ್ಥಿತ ಕಾರ್ಯತಂತ್ರವನ್ನು ದಾಖಲೆಗಳ ಸಹಿತ ಅವರು ವಿವರಿಸಿದರು.

ಬಿಜೆಪಿಯವರು ಕೇವಲ ಸುಳ್ಳಿನಲ್ಲಿ ಮಾತ್ರವಲ್ಲ, ಮತಗಳ್ಳತನದಲ್ಲೂ ನಿಸ್ಸೀಮರು ಎನ್ನುವುದು ಸಾಬೀತಾಗಿದೆ. ನಾವು ಇದನ್ನು ಸಹಿಸುವುದಿಲ್ಲ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯ ಕಾಪಾಡಲು ಹೋರಾಟದ ಮಾರ್ಗ ಹಿಡಿಯುತ್ತೇವೆ ಎಂದರು.

ಇದನ್ನು ಓದಿ: ಬಿಹಾರ ಚುನಾವಣೆ : ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ

ಬಿಜೆಪಿ ಮತಗಳ್ಳತನದ ಮೂಲಕ ಅನೇಕ ವಿಧಾನಸಭೆಗಳು ಮತ್ತು ಲೋಕಸಭೆ ಚುನಾವಣೆಯಲ್ಲಿ ಗೆದ್ದಿರುವುದು ಸ್ಪಷ್ಟವಾಗಿ ಗೊತ್ತಾಗಿದೆ. ಲೋಕಸಭೆ ವಿರೋಧಪಕ್ಷದ ನಾಯಕರಾದ ರಾಹುಲ್ ಗಾಂಧಿಯವರು ನಿರಂತರ ಅಧ್ಯಯನ, ಪರಿಶೀಲನೆ ಬಳಿಕ ದಾಖಲೆ ಸಮೇತ ಮತಗಳ್ಳತನವನ್ನು ದೇಶದ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿವರಿಸಿದರು.

ಸಂವಿಧಾನ ಬಾಹಿರವಾಗಿ ಅಧಿಕಾರ ಹಿಡಿಯುವುದು ಸಂವಿಧಾನಕ್ಕೆ ಎಸಗುವ ದ್ರೋಹ. ರಾಹುಲ್ ಗಾಂಧಿಯವರು, ಬೆಂಗಳೂರು ಕೇಂದ್ರ ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನವನ್ನು ಸ್ಪಷ್ಟವಾಗಿ, ದಾಖಲೆ ಸಮೇತ ಬಯಲಿಗೆ ಎಳೆದು ದಾಖಲೆಗಳನ್ನು ದೇಶದ ಜನರ ಮುಂದೆ ಇಟ್ಟಿದ್ದಾರೆ. ಇಷ್ಟಾದರೂ ಚುನಾವಣಾ ಆಯೋಗ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸುತ್ತಿಲ್ಲ, ದೇಶದ ಜನರ ಮುಂದೆ ಇರಿಸಿದ ದಾಖಲೆಗಳಿಗೂ ಉತ್ತರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆದ್ದರಿಂದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಾಪಾಡಲು ಕಾಂಗ್ರೆಸ್ ಪಕ್ಷದಿಂದ ಕೋಟಿಗೂ ಅಧಿಕ ಮಂದಿಯ ಸಹಿ ಸಂಗ್ರಹ ಮಾಡಲಾಗಿದೆ. ಇದನ್ನು ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗಳಿಗೂ ನೀಡಲಾಗುವುದು ಎಂದರು.
ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರೂ ಸಚಿವರೂ ಆದ ಸತೀಶ್ ಜಾರಕಿಹೊಳಿ, ಪಕ್ಷದ ಕಾರ್ಯಾಧ್ಯಕ್ಷರಾದ ಜಿ.ಸಿ.ಚಂದ್ರಶೇಖರ್, ಸಲೀಂ ಅಹಮದ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್ ಸೇರಿ ಪಕ್ಷದ ಮುಖಂಡರುಗಳು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago