ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದರೆ, ಇದರ ವಿರುದ್ಧ ಪ್ರತಿಭಟಿಸುವ ಮೂಲಕ ಬಿಜೆಪಿಗರು ರೈತ ವಿರೋಧಿಗಳಾಗಿ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಬಿಜೆಪಿ ಆರೋಪಿಸುತ್ತಿದೆ. ಜನರ ಮೇಲೆ ಕಾಳಜಿ ಇದ್ದರೆ, ಕೇಂದ್ರದಿಂದ ಆಗುತ್ತಿರುವ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ ಎಂದರು.
ನೀರಿನ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ, ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಮುಂದಿನ ಹಂತಗಳ ಯೋಜನೆ ಕೈಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯವಾಗಿದೆ. ಇದಕ್ಕೂ ಮುನ್ನ ಜನರಿಗೆ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕಿದೆ ಎಂದು ತಿಳಿಸಿದರು.
ಇನ್ನು ಕಸದ ವಿಚಾರವಾಗಿ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ 2022ರಲ್ಲಿ ದುಬಾರಿ ಸೆಸ್ ವಿಧಿಸಿತ್ತು. ನಾವು ಅದನ್ನು ಕಡಿಮೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜಾಹೀರಾತು ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ, ಬಿಜೆಪಿಯವರು ಇದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…