ಬೆಂಗಳೂರು: ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದರೆ, ಇದರ ವಿರುದ್ಧ ಪ್ರತಿಭಟಿಸುವ ಮೂಲಕ ಬಿಜೆಪಿಗರು ರೈತ ವಿರೋಧಿಗಳಾಗಿ ವರ್ತಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ ಎಂದು ಬಿಜೆಪಿ ಆರೋಪಿಸುತ್ತಿದೆ. ಜನರ ಮೇಲೆ ಕಾಳಜಿ ಇದ್ದರೆ, ಕೇಂದ್ರದಿಂದ ಆಗುತ್ತಿರುವ ಬೆಲೆ ಏರಿಕೆ ಬಗ್ಗೆ ಮಾತನಾಡಲಿ. ಪೆಟ್ರೋಲ್, ಡೀಸೆಲ್, ಜಾನುವಾರುಗಳಿಗೆ ಹಾಕುವ ಬೂಸಾ ದರಗಳನ್ನು ಇಳಿಸಲಿ ಎಂದರು.
ನೀರಿನ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ, ಜಲ ಮಂಡಳಿ ವಾರ್ಷಿಕವಾಗಿ 1 ಸಾವಿರ ಕೋಟಿ ನಷ್ಟ ಅನುಭವಿಸುತ್ತಿದ್ದು, ಬಡವರಿಗೆ ಹೊರೆಯಾಗದಂತೆ ನೀರಿನ ದರ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. ಮುಂದಿನ ಹಂತಗಳ ಯೋಜನೆ ಕೈಗೊಳ್ಳಬೇಕಾದರೆ ದರ ಏರಿಕೆ ಅನಿವಾರ್ಯವಾಗಿದೆ. ಇದಕ್ಕೂ ಮುನ್ನ ಜನರಿಗೆ ನೀರಿನ ಪ್ರಾಮುಖ್ಯತೆ ಅರಿಯುವಂತೆ ಮಾಡಬೇಕಿದೆ ಎಂದು ತಿಳಿಸಿದರು.
ಇನ್ನು ಕಸದ ವಿಚಾರವಾಗಿ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ 2022ರಲ್ಲಿ ದುಬಾರಿ ಸೆಸ್ ವಿಧಿಸಿತ್ತು. ನಾವು ಅದನ್ನು ಕಡಿಮೆ ಮಾಡುತ್ತಿದ್ದೇವೆ. ಈ ವಿಚಾರವಾಗಿ ಜಾಹೀರಾತು ಹಾಗೂ ಪತ್ರಿಕಾ ಪ್ರಕಟಣೆ ಹೊರಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ, ಬಿಜೆಪಿಯವರು ಇದರಲ್ಲಿಯೂ ರಾಜಕಾರಣ ಮಾಡುತ್ತಿದ್ದಾರೆ ಎಂದರು.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…