ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಭೆಗೆ ಹಾಜರಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಬಹುದಾಗಿದ್ದರೂ, ಸಭೆಗೆ ಗೈರಾಗುವ ಮೂಲಕ ಬಿಜೆಪಿಯವರು ಬೆಂಗಳೂರಿನ ಅಭಿವೃದ್ಧಿಯ ವಿರೋಧಿಗಳೆಂದು ನಿರೂಪಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಇದನ್ನೂ ಓದಿ:-ಮುಟ್ಟಿನ ರಜೆ : ಸಮಿತಿಯೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವ ಸಂತೋಷ್ ಲಾಡ್
ಜಿಬಿಎ ಸಭೆಗೆ ಬಿಜೆಪಿಯವರು ಗೈರಾಗಿದ್ದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, ಬಿಜೆಪಿಗರಿಗೆ ಬೆಂಗಳೂರಿನ ಬಗ್ಗೆ ಕಳಕಳಿಯಿದ್ದರೆ ಜಿಬಿಎ ಸಭೆಗೆ ಗೈರಾಗುತ್ತಿರಲಿಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಂಬುದು ಪ್ರಜಾಪ್ರಭುತ್ವದ ವೇದಿಕೆಯಾಗಿದೆ. ಆಡಳಿತ ವಿಕೇಂದ್ರೀಕರಣಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಾರೆ ಎಂದು ತಿಳಿಯುತ್ತದೆ. ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ಇಲ್ಲಿನ ಜನರಿಗೆ ಉತ್ತಮ ಆಡಳಿತ, ಸೌಲಭ್ಯಗಳನ್ನು ನೀಡಲು ನಗರವನ್ನು ವಿಭಜಿಸಲೇಬೇಕೆಂಬ ನಿಲುವನ್ನು ಪ್ರಥಮವಾಗಿ ಬಿಜೆಪಿಯವರೇ ಹೊಂದಿದ್ದರು . ಆದರೆ ಈಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಬಿಜೆಪಿಯವರು ಪುನ: ಅಧಿಕಾರಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…