ರಾಜ್ಯ

ಸಿದ್ದರಾಮಯ್ಯಗೆ ಕ್ಷಮೆಯಾಚಿಸಿದ ಬಿಜೆಪಿ ಶಾಸಕ: ಕ್ಷಮಾಪಣ ಪತ್ರಕ್ಕೆ ಸಿಎಂ ಶ್ಲಾಘನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ವೈಯಕ್ತಿಕ ನಿಂದನೆ ಶಬ್ದ ಬಳಸಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಅರವಿಂದ್‌ ಬೆಲ್ಲದ್‌ ಅವರು ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ್ದಾರೆ.

ಕೆಳದಿನಗಳ ಹಿಂದೆ ಜಿಂದಾಲ್‌ಗೆ ಭೂಮಿ ಕೊಟ್ಟಿರೋ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಅರವಿಂದ್‌ ಬೆಲ್ಲದ್‌, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂಬ ಪದ ಪ್ರಯೋಗ ಮಾಡಿದ್ದರು. ಇದೀಗ ಈ ಬಗ್ಗೆ ಬೆಲ್ಲದ್‌, ಸಿಎಂಗೆ ಕ್ಷಮಾಪಣೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಕ್ಷಮಾಪಣೆ ಪತ್ರ ಹೀಗಿದೆ….
ಆಗಸ್ಟ್‌ 24 ರ ಶನಿವಾರದಂದು ಬೆಂಗಳೂರಿನ ಪ್ಯಾಲೆಸ್ ಮೈದಾನದಲ್ಲಿ ಜಿಂದಾಲ್ ಕಂಪನಿಯ ಕುರಿತು ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಜಿಂದಾಲ್ ಅವರಿಗೆ ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ಧರಾಮಯ್ಯನವರದ್ದು ಏನು ಅಪ್ಪನ ಮನೆ ಆಸ್ತಿನಾ ಎಂದು ವೇಗವಾಗಿ ಹೇಳಿರುತ್ತೇನೆ. ಆ ಸಂದರ್ಭದಲ್ಲಿ ಮಾತ್ರ ಬಳಸಿದ ಈ ಪದದ ಬಳಕೆಯು ನನಗೆ ಶೋಭೆ ತಂದಿರುವುದಿಲ್ಲ, ತಮಗೆ ನಾನು ಈ ಪತ್ರದ ಮುಖಾಂತರ ಕ್ಷಮೆಯಾಚಿಸುತ್ತಿದ್ದೇನೆ. ಎಂದು ಅರವಿಂದ್‌ ಬೆಲ್ಲದ್ ಕ್ಷಮಾಪತ್ರದಲ್ಲಿ ಬರೆದು‌ ಸಿಎಂಗೆ ಕ್ಷಮೆಯಾಚಿಸಿದ್ದಾರೆ.

ಕ್ಷಮಾಪಣೆಗೆ ಸಿಎಂ ಶ್ಲಾಘನೆ
ಇದೇ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದು, ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ.

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ.

ನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ.

ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹರನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ.

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ. “ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago