ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ ಬರುತ್ತೆ. ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಎಂದು ದೇವರು ಆದೇಶ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ. ಇಲ್ಲದಿದ್ದರೆ ನನ್ನ ಪಾಡಿಗೆ ನಾನು ಇರುತ್ತೇನೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ವಿರುದ್ಧ ಭ್ರಷ್ಟಾಚಾರ ಅಥವಾ ಏನಾದರೂ ಹಗರಣ ಇದ್ದಿದ್ದರೆ ನನ್ನನ್ನು ಬಿಡುತ್ತಿದ್ದರಾ? ಈ ಹಿಂದೆ ನನ್ನ ಮೇಲೂ ದಾಳಿ ಮಾಡಿಸಿದ್ದಾರೆ. ಗುಪ್ತಚರ ಇಲಾಖೆಯನ್ನು ಬಿಟ್ಟಿದ್ದರು. ಎಲ್ಲವನ್ನೂ ನೋಡಿದರೂ ಏನೂ ಆಗಲಿಲ್ಲ. ಅದಕ್ಕೆ ಸುಮ್ಮನೆ ಕೂತಿದ್ದಾರೆ ಅಷ್ಟೇ. ನನ್ನ ಮೇಲೆ ಆ ಭಗವಂತನ ಕೃಪೆಯಿದೆ. ಜನರ ಶಕ್ತಿಯಿದೆ ಎಂದರು.
ಇನ್ನು ಬೆಂಗಳೂರಿನಲ್ಲಿಂದು ನಡೆದ ಕೋರ್ ಕಮಿಟಿ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನನ್ನನ್ನು ಯಾಕೆ ಕೋರ್ ಕಮಿಟಿ ಸಭೆಗೆ ಕರೆಯಬೇಕು. ನಾನು ಕೋರ್ ಕಮಿಟಿ ಮೆಂಬರ್ ಅಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…
ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಇಂದು 2026-27ನೇ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ಬಜೆಟ್ನಲ್ಲಿ…