ರಾಜ್ಯ

ಸಿಎಂ ಆಗುವ ಆಸೆ ಬಿಚ್ಚಿಟ್ಟ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬಾಗಲಕೋಟೆ: ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಯಾಕಾಗಬಾರದು? ನನ್ನಲ್ಲಿ ಏನು ಕೊರತೆಯಿದೆ? ಪ್ರಾಮಾಣಿಕರನ್ನು ಸಿಎಂ ಮಾಡಬೇಕು ಅಂದರೆ ಮೊದಲು ನನ್ನ ಹೆಸರೇ ಬರುತ್ತೆ. ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಎಂದು ದೇವರು ಆದೇಶ ಕೊಟ್ಟರೆ ನಾನೇ ಸಿಎಂ ಆಗುತ್ತೇನೆ. ಇಲ್ಲದಿದ್ದರೆ ನನ್ನ ಪಾಡಿಗೆ ನಾನು ಇರುತ್ತೇನೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ನನ್ನ ವಿರುದ್ಧ ಭ್ರಷ್ಟಾಚಾರ ಅಥವಾ ಏನಾದರೂ ಹಗರಣ ಇದ್ದಿದ್ದರೆ ನನ್ನನ್ನು ಬಿಡುತ್ತಿದ್ದರಾ? ಈ ಹಿಂದೆ ನನ್ನ ಮೇಲೂ ದಾಳಿ ಮಾಡಿಸಿದ್ದಾರೆ. ಗುಪ್ತಚರ ಇಲಾಖೆಯನ್ನು ಬಿಟ್ಟಿದ್ದರು. ಎಲ್ಲವನ್ನೂ ನೋಡಿದರೂ ಏನೂ ಆಗಲಿಲ್ಲ. ಅದಕ್ಕೆ ಸುಮ್ಮನೆ ಕೂತಿದ್ದಾರೆ ಅಷ್ಟೇ. ನನ್ನ ಮೇಲೆ ಆ ಭಗವಂತನ ಕೃಪೆಯಿದೆ. ಜನರ ಶಕ್ತಿಯಿದೆ ಎಂದರು.

ಇನ್ನು ಬೆಂಗಳೂರಿನಲ್ಲಿಂದು ನಡೆದ ಕೋರ್‌ ಕಮಿಟಿ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನನ್ನನ್ನು ಯಾಕೆ ಕೋರ್‌ ಕಮಿಟಿ ಸಭೆಗೆ ಕರೆಯಬೇಕು. ನಾನು ಕೋರ್‌ ಕಮಿಟಿ ಮೆಂಬರ್‌ ಅಲ್ಲ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

2 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

2 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

2 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

2 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

14 hours ago