Byrathi Basavaraj
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ5 ಆಗಿರುವ ಭೈರತಿ ಬಸವರಾಜ್ ಅವರನ್ನು ಸಿಐಡಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಎರಡು ದಿನಗಳ ಹಿಂದೆ ಬಂಧಿಸಿದ್ದರು.
ಕೋರ್ಟ್ ಹಾಜರುಪಡಿಸಿದ್ದಾಗ ಶಾಸಕ ಭೈರತಿ ಬಸವರಾಜ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಯಿದೆ. ಹಾಗಾಗಿ ಚಿಕಿತ್ಸೆ ಪಡೆಯಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಸಿಐಡಿ ಅಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವಂತೆ ಸೂಚಿಸಿತ್ತು.
ಭೈರತಿ ಬಸವರಾಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಆಂಜಿಯೋಗ್ರಾಂ ಸೇರಿದಂತೆ ಹಲವು ಪರೀಕ್ಷೆಗಳನ್ನು ಚಿಕಿತ್ಸೆಯನ್ನು ನೀಡಲಾಗಿತ್ತು. ಇಂದು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ಗೆ ಸಿಐಡಿ ಪೊಲೀಸರು ಭೈರತಿ ಬಸವರಾಜ್ ಅವರನ್ನು ಹಾಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ ಕೇಳಿದ್ದಾರೆ.
ಸಿಐಡಿ ಅಧಿಕಾರಿಗಳ ವಾದ ಆಲಿಸಿದ ಕೋರ್ಟ್, ಫೆಬ್ರವರಿ.21ರವರೆಗೆ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…