ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಸಿಎಂ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು ಎಂದು ಡಿ.ಕೆ.ಶಿವಕುಮಾರ್ಗೆ ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅವಮಾನ. ಇದಕ್ಕಿಂತ ದೊಡ್ಡ ಅವಮಾನ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದರು.
ಇನ್ನು ಸಂಸದೆ ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರವಾಗಿ ಮಾತನಾಡಿದ ಅವರು, ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…