ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಸಿಎಂ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು ಎಂದು ಡಿ.ಕೆ.ಶಿವಕುಮಾರ್ಗೆ ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅವಮಾನ. ಇದಕ್ಕಿಂತ ದೊಡ್ಡ ಅವಮಾನ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದರು.
ಇನ್ನು ಸಂಸದೆ ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರವಾಗಿ ಮಾತನಾಡಿದ ಅವರು, ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರ ಪದಗ್ರಹಣಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಬುಧವಾರ ರಾಜ್ಯದ ನೂತನ ಸಿಎಂ ಆಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ…
ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ನಿರ್ಮಾಣಗೊಳ್ಳಲಿರುವ ದೇಶದ ಎರಡನೇ ಅತಿದೊಡ್ಡ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ರಾಜ್ಯ ಸರ್ಕಾರದಿಂದ ಶಂಕುಸ್ಥಾಪನೆ ನೆರವೇರಿಸಲಾಗಿದೆ.…
ಈ ಬಾರಿಯ ಬೇಸಿಗೆಯ ಧಗೆ ಮಧ್ಯಾಹ್ನದ ವೇಳೆ ಯಾರೂ ಹೊರಗಡೆ ಓಡಾಡದಂತೆ ಮಾಡಿದೆ. ವಾಹನ ಸವಾರರ ಸ್ಥಿತಿಯಂತೂ ಹೇಳತೀರದು. ರಸ್ತೆ…
ರಾಜ್ಯದಲ್ಲಿ ಅತ್ಯಂತ ಪ್ರಬಲ ನಾಯಕರಲ್ಲಿ ಸಿದ್ದರಾಮಯ್ಯನವರೂ ಕೂಡ ಒಬ್ಬರು. ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡುವುದರ ಮೂಲಕ ಅವರ ಆಡಳಿತ…
ಕೆ.ಪಿ.ನಾಗರಾಜ್, ಮೈಸೂರು ಕರ್ನಾಟಕ ರಾಜಕೀಯ ವ್ಯಾಕರಣವನ್ನೇ ಬದಲಾಯಿಸಿದ ಸಿದ್ದರಾಮಯ್ಯ ಮೈಸೂರು ರಾಜಕಾರಣ ಅಂದರೆ ಒಮ್ಮೆ ಒಡೆಯರ್ ಯುಗ, ನಂತರ ದೇವರಾಜ…
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…