ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಬಂಧನವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದು, ತಪ್ಪು ಮಾಡಿರೋದು ಒಬ್ಬ ಸಾಮಾನ್ಯ ವ್ಯಕ್ತಿಯಲ್ಲ. ಅವರು ಮಾಜಿ ಮಂತ್ರಿ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುನಿರತ್ನ ಬಂಧನ ವಿಚಾರವಾಗಿ ರಾಜಕೀಯ ಮಾಡೋದು ಬೇಡ. ತಪ್ಪು ಮಾಡಿರುವುದಕ್ಕೆ ಮುನಿರತ್ನ ಬಂಧನವಾಗಿದೆ ಅಷ್ಟೆ ಎಂದರು.
ಮುನಿರತ್ನರನ್ನು ತನಿಖೆ ಮಾಡಲು ಪೊಲೀಸರು ಬಂಧಿಸಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಅದು ತಪ್ಪೇ. ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದರು.
ಜಾತಿ ಧರ್ಮವನ್ನು ಕೀಳಾಗಿ ನೋಡುವುದು. ಮಹಿಳೆಯರಿಗೆ ಅಗೌರವ ಕೊಡುವುದನ್ನು ಯಾರೂ ಕೂಡ ಸಹಿಸಲ್ಲ. ಕೆಲವರು ಇದಕ್ಕೆ ರಾಜಕೀಯ ಬಣ್ಣ ಬಳಿಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ದ್ವೇಷಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಪೊಲೀಸರ ತನಿಖೆಯಿಂದ ಎಲ್ಲಾ ವಿಚಾರಗಳು ಸಾರ್ವಜನಿಕವಾಗಿ ಚರ್ಚೆಯಾಗುತ್ತವೆ. ಅಲ್ಲಿಯ ತನಕ ಬಿಜೆಪಿ ನಾಯಕರು ಸುಮ್ಮನಿದ್ದರೆ ಒಳ್ಳೆಯದು ಎಂದರು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…