ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್.ಆರ್.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ.
ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್.ಆರ್.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್ನಿಂದ 2022ರ ಜುಲೈ.19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಗರ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.
ಶಾಸಕ ಮುನಿರತ್ನ ಅವಧಿಯಲ್ಲಿ ಕಾಮಗಾರಿ ನಡೆಸದೇ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್.23ರಂದೇ ತನಿಖೆಗೆ ಆದೇಶ ನೀಡಿದ್ದರು. ಆದರೆ, ಇದೀಗ ನಗರ ಪಾಲಿಕೆಯ ಕಂದಾಯ ವಿಶೇಷ ಮುನೀಶ್ ಮೌದ್ಗೀಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…