ಬೆಂಗಳೂರು: ಆತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಆರ್.ಆರ್.ಕ್ಷೇತ್ರದಲ್ಲಿ 2020ರಿಂದ 2022ರವರೆಗೆ ನಡೆದ ಕಾಮಗಾರಿಗಳ ತನಿಖೆಗೆ ಆದೇಶಿಸಿದ್ದರಿಂದ ಮತ್ತೊಂದು ಸಂಕಷ್ಟ ಎದುರಾಗಿದೆ.
ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡುವ ಆರ್.ಆರ್.ಕ್ಷೇತ್ರದಲ್ಲಿ 2020ರ ಸೆಪ್ಟಂಬರ್ನಿಂದ 2022ರ ಜುಲೈ.19ರ ಅವಧಿಯಲ್ಲಿ ನಡೆದ ಕಾಮಗಾರಿಗಳಲ್ಲಿ 500 ಕೋಟಿ ರೂ.ಗಳಿಗೂ ಅಧಿಕ ಅವ್ಯವಹಾರ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೀಗಾಗಿ ನಗರ ಪಾಲಿಕೆ ಕಂದಾಯ ವಿಭಾಗದ ವಿಶೇಷ ಆಯುಕ್ತರ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದೆ.
ಶಾಸಕ ಮುನಿರತ್ನ ಅವಧಿಯಲ್ಲಿ ಕಾಮಗಾರಿ ನಡೆಸದೇ ಬಿಲ್ ಮಾಡಿಸಿಕೊಂಡಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೆಪ್ಟೆಂಬರ್.23ರಂದೇ ತನಿಖೆಗೆ ಆದೇಶ ನೀಡಿದ್ದರು. ಆದರೆ, ಇದೀಗ ನಗರ ಪಾಲಿಕೆಯ ಕಂದಾಯ ವಿಶೇಷ ಮುನೀಶ್ ಮೌದ್ಗೀಲ್ ನೇತೃತ್ವದಲ್ಲಿ ತನಿಖೆಗೆ ಸಮಿತಿ ರಚಿಸಿದೆ.
ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ…
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…