ರಾಜ್ಯ

ಶಾಸಕ ಮುನಿರತ್ನಗೆ ಶಾಕ್:‌ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಮಹಿಳೆಯೊಬ್ಬರೂ ನೀಡಿದ ದೂರಿನ ಆಧಾರದ ಮೇಲೆ ಆತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್.5 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸರು ಆತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವ ಮುಂದಿನ 14 ದಿನಗಳವರೆ ಅಂದರೆ ಅಕ್ಟೋಬರ್.‌5ರವರೆಗೆ ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ನೀಡಿದೆ.

ಮುನಿರತ್ನ ಅವರನ್ನು ಈ ಮೊದಲು, ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾತ್ತು. ಈ ಪ್ರಕರಣದ ಕುರಿತು ಗುರುವಾರ(ಸೆ.19)ರಂದು ಜಾಮೀನು ಪಡೆದಿದ್ದರು. ಇದಾದ ಬಳಿಕ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಅಸಮಾಧಾನ ಹೊರಹಾಕಿದ ಶಾಸಕ ಮುನಿರತ್ನ ಅವರು, ಲೋಕಸಭಾ ಚುನಾವಣೆ ನಡೆದ ನಂತರ ನನ್ನನ್ನು ಜೈಲಿನಲ್ಲಿ ಇರಿಸಲು ಸಂಪೂರ್ಣ ಯೋಜನೆ ಮಾಡಲಾಗಿದೆ. ಹೀಗಾಗಿ ಆಕೆಯಿಂದ ಐದು ವರ್ಷಗಳ ನಂತರ ಆತ್ಯಾಚಾರದ ದೂರು ನೀಡಿಸಿದ್ದಾರೆ ಎಂದರು. ನಾನು ಜನಪ್ರತಿನಿಧಿಯಾದವನು, ನನಗೆ ಸಾರ್ವಜನಿಕರ ಹತ್ತಿರ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೇ ರಾಜೀನಾಮೆ ಬೇಕಾದರೂ ನೀಡುತ್ತೇನೆ. ಆದರೆ ನನ್ನಿಂದ ಇಂತಹ ಹಿಂಸೆಯನ್ನು ಅನುಭವಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago