ರಾಜ್ಯ

ಶಾಸಕ ಮುನಿರತ್ನಗೆ ಶಾಕ್:‌ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಮಹಿಳೆಯೊಬ್ಬರೂ ನೀಡಿದ ದೂರಿನ ಆಧಾರದ ಮೇಲೆ ಆತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್.5 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸರು ಆತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವ ಮುಂದಿನ 14 ದಿನಗಳವರೆ ಅಂದರೆ ಅಕ್ಟೋಬರ್.‌5ರವರೆಗೆ ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ನೀಡಿದೆ.

ಮುನಿರತ್ನ ಅವರನ್ನು ಈ ಮೊದಲು, ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾತ್ತು. ಈ ಪ್ರಕರಣದ ಕುರಿತು ಗುರುವಾರ(ಸೆ.19)ರಂದು ಜಾಮೀನು ಪಡೆದಿದ್ದರು. ಇದಾದ ಬಳಿಕ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಅಸಮಾಧಾನ ಹೊರಹಾಕಿದ ಶಾಸಕ ಮುನಿರತ್ನ ಅವರು, ಲೋಕಸಭಾ ಚುನಾವಣೆ ನಡೆದ ನಂತರ ನನ್ನನ್ನು ಜೈಲಿನಲ್ಲಿ ಇರಿಸಲು ಸಂಪೂರ್ಣ ಯೋಜನೆ ಮಾಡಲಾಗಿದೆ. ಹೀಗಾಗಿ ಆಕೆಯಿಂದ ಐದು ವರ್ಷಗಳ ನಂತರ ಆತ್ಯಾಚಾರದ ದೂರು ನೀಡಿಸಿದ್ದಾರೆ ಎಂದರು. ನಾನು ಜನಪ್ರತಿನಿಧಿಯಾದವನು, ನನಗೆ ಸಾರ್ವಜನಿಕರ ಹತ್ತಿರ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೇ ರಾಜೀನಾಮೆ ಬೇಕಾದರೂ ನೀಡುತ್ತೇನೆ. ಆದರೆ ನನ್ನಿಂದ ಇಂತಹ ಹಿಂಸೆಯನ್ನು ಅನುಭವಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

1 hour ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

4 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

5 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

5 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

5 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

5 hours ago