ರಾಜ್ಯ

ಶಾಸಕ ಮುನಿರತ್ನಗೆ ಶಾಕ್:‌ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಮಹಿಳೆಯೊಬ್ಬರೂ ನೀಡಿದ ದೂರಿನ ಆಧಾರದ ಮೇಲೆ ಆತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್.5 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸರು ಆತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವ ಮುಂದಿನ 14 ದಿನಗಳವರೆ ಅಂದರೆ ಅಕ್ಟೋಬರ್.‌5ರವರೆಗೆ ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ನೀಡಿದೆ.

ಮುನಿರತ್ನ ಅವರನ್ನು ಈ ಮೊದಲು, ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾತ್ತು. ಈ ಪ್ರಕರಣದ ಕುರಿತು ಗುರುವಾರ(ಸೆ.19)ರಂದು ಜಾಮೀನು ಪಡೆದಿದ್ದರು. ಇದಾದ ಬಳಿಕ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಅಸಮಾಧಾನ ಹೊರಹಾಕಿದ ಶಾಸಕ ಮುನಿರತ್ನ ಅವರು, ಲೋಕಸಭಾ ಚುನಾವಣೆ ನಡೆದ ನಂತರ ನನ್ನನ್ನು ಜೈಲಿನಲ್ಲಿ ಇರಿಸಲು ಸಂಪೂರ್ಣ ಯೋಜನೆ ಮಾಡಲಾಗಿದೆ. ಹೀಗಾಗಿ ಆಕೆಯಿಂದ ಐದು ವರ್ಷಗಳ ನಂತರ ಆತ್ಯಾಚಾರದ ದೂರು ನೀಡಿಸಿದ್ದಾರೆ ಎಂದರು. ನಾನು ಜನಪ್ರತಿನಿಧಿಯಾದವನು, ನನಗೆ ಸಾರ್ವಜನಿಕರ ಹತ್ತಿರ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೇ ರಾಜೀನಾಮೆ ಬೇಕಾದರೂ ನೀಡುತ್ತೇನೆ. ಆದರೆ ನನ್ನಿಂದ ಇಂತಹ ಹಿಂಸೆಯನ್ನು ಅನುಭವಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ನಾಪೋಕ್ಲು| ಕಾಡಾನೆ ದಾಳಿ: ಬೈಕ್‌ ಸವಾರನಿಗೆ ಗಂಭೀರ ಗಾಯ

ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್‌ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…

54 mins ago

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಗಾಯಕ ಸೋನು ನಿಗಮ್‌ ಭೇಟಿ

ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್‌ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…

55 mins ago

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

1 hour ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

2 hours ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

4 hours ago