ರಾಜ್ಯ

ಶಾಸಕ ಮುನಿರತ್ನಗೆ ಶಾಕ್:‌ ಮತ್ತೆ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಮಹಿಳೆಯೊಬ್ಬರೂ ನೀಡಿದ ದೂರಿನ ಆಧಾರದ ಮೇಲೆ ಆತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅಕ್ಟೋಬರ್.5 ರವರೆಗೆ ನ್ಯಾಯಾಂಗ ಬಂಧನದಲ್ಲಿರಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು, ಸಂತ್ರಸ್ಥೆ ನೀಡಿದ ದೂರಿನ ಆಧಾರದ ಮೇಲೆ ಕಗ್ಗಲಿಪುರ ಪೊಲೀಸರು ಆತ್ಯಾಚಾರ ಪ್ರಕರಣದಲ್ಲಿ ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ನ್ಯಾಯಾಲಯವ ಮುಂದಿನ 14 ದಿನಗಳವರೆ ಅಂದರೆ ಅಕ್ಟೋಬರ್.‌5ರವರೆಗೆ ನ್ಯಾಯಾಂಗ ಬಂಧನದಲ್ಲಿರುವಂತೆ ಆದೇಶ ನೀಡಿದೆ.

ಮುನಿರತ್ನ ಅವರನ್ನು ಈ ಮೊದಲು, ಬೆಂಗಳೂರು ಮಹಾನಗರ ಪಾಲಿಕೆ ಗುತ್ತಿಗೆದಾರ ಜಾತಿ ನಿಂದನೆ ಹಾಗೂ ಬೆದರಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾತ್ತು. ಈ ಪ್ರಕರಣದ ಕುರಿತು ಗುರುವಾರ(ಸೆ.19)ರಂದು ಜಾಮೀನು ಪಡೆದಿದ್ದರು. ಇದಾದ ಬಳಿಕ ಅವರನ್ನು ಆತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದರು.

ವಿಚಾರಣೆ ವೇಳೆ ಅಸಮಾಧಾನ ಹೊರಹಾಕಿದ ಶಾಸಕ ಮುನಿರತ್ನ ಅವರು, ಲೋಕಸಭಾ ಚುನಾವಣೆ ನಡೆದ ನಂತರ ನನ್ನನ್ನು ಜೈಲಿನಲ್ಲಿ ಇರಿಸಲು ಸಂಪೂರ್ಣ ಯೋಜನೆ ಮಾಡಲಾಗಿದೆ. ಹೀಗಾಗಿ ಆಕೆಯಿಂದ ಐದು ವರ್ಷಗಳ ನಂತರ ಆತ್ಯಾಚಾರದ ದೂರು ನೀಡಿಸಿದ್ದಾರೆ ಎಂದರು. ನಾನು ಜನಪ್ರತಿನಿಧಿಯಾದವನು, ನನಗೆ ಸಾರ್ವಜನಿಕರ ಹತ್ತಿರ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಿದೆ. ನಾನು ಈ ನ್ಯಾಯಾಲಯದಲ್ಲೇ ರಾಜೀನಾಮೆ ಬೇಕಾದರೂ ನೀಡುತ್ತೇನೆ. ಆದರೆ ನನ್ನಿಂದ ಇಂತಹ ಹಿಂಸೆಯನ್ನು ಅನುಭವಿಸಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

12 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

16 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

16 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

16 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

16 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago