ರಾಜ್ಯ

ಶಾಸಕ ಮುನಿರತ್ನಗೆ ಸಂಕಷ್ಟ: ಅಕ್ಟೋಬರ್.‌5ರವರೆಗೆ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ ಅವರನನು ಅಕ್ಟೋಬರ್.‌5 ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬೆನ್ನಲ್ಲೇ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದರು.

ನಂತರ ಶಾಸಕ ಮುನಿರತ್ನಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು. ಇದೀಗ ಅವರನ್ನು ಅಕ್ಟೋಬರ್.‌5 ರವರೆಗೆ ಎಸ್‌ಐಡಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಈ ಮೂಲಕ ಬಿಜೆಪಿ ಶಾಸಕ ಮುನಿರತ್ನಗೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ಸಂಪೂರ್ಣ ತನಿಖೆ ಆಗುವವರೆಗೂ ಜಾಮೀನು ಸಿಗುವುದು ಕಷ್ಟ ಎನ್ನಲಾಗುತ್ತಿದೆ.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

45 mins ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

50 mins ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

56 mins ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

59 mins ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

10 hours ago