ಬೆಂಗಳೂರು: ಸಚಿವ ರಾಜಣ್ಣಗೆ ಮಂಪರು ಪರೀಕ್ಷೆ ಮಾಡಿಸಿ ಸತ್ಯ ಹೊರ ತರಬೇಕು ಎಂದು ಶಾಸಕ ಮುನಿರತ್ನ ಹೇಳಿದ್ದಾರೆ.
ರಾಜ್ಯದಲ್ಲಿ ಕೋಲಾಹಲ ಎದ್ದಿರುವ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎನ್.ರಾಜಣ್ಣ ಅವರಿಗೆ ಮಂಪರು ಪರೀಕ್ಷೆ ಮಾಡಿಸಿ ಎಂದು ಆಗ್ರಹಿಸಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಇದಕ್ಕೆಲ್ಲಾ ಕಾರಣ ಡಿಸಿಎಂ ಡಿಕೆಶಿ ಅವರೇ ಹೊರತು ಬೇರೆ ಯಾರೂ ಅಲ್ಲ. ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ಸಿಬಿಐಗೆ ಕೊಟ್ಟರೆ ಸರ್ಕಾರ ಉಳಿಯಲ್ಲ ಎಂದು ಭವಿಷ್ಯ ನುಡಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಲ್ಲರ ಮೇಲೂ ಷಡ್ಯಂತ್ರ ಮಾಡಿಕೊಂಡು ಬರುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಆಯ್ತು, ನನ್ನ ಮೇಲೂ ಆಯ್ತು, ರೇವಣ್ಣ ಅವರ ವಿರುದ್ಧವೂ ಮಾಡಿದ್ದರು ಎಂದು ಗಂಭೀರ ಆರೋಪ ಮಾಡಿದರು.
ಇದರ ಹಿಂದೆ ದೊಡ್ಡ ಜಾಲವೇ ಇದೆ ಎಂದು ಸಂಶಯ ವ್ಯಕ್ತಪಡಿಸಿದ ಅವರು, ಇದರ ಹಿಂದೆ ಇರುವವರು ಯಾರು ಎಂದು ತನಿಖೆ ನಡೆಸಬೇಕು. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪು ಮಾಡಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…