ಬೆಂಗಳೂರು: ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ನಂದಿನಿ ಲೇಔಟ್ನಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ.
ಇಂದು (ಡಿ.25) ಲಕ್ಷ್ಮಿದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಅಯೋಜಿಸಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಅವರ ತಲೆಗೆ ಮೊಟ್ಟೆ ಎಸೆದಿದ್ದಾರೆ. ಬಳಿಕ ಮುನಿರತ್ನ ಹಾಗೂ ಅವರ ಬೆಂಬಲಿಗರು ಕಂಠೀರವ ಸ್ಟೇಡಿಯಂ ಬಳಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ.
ಈ ವೇಳೆ ಕಾಂಗ್ರೆಸ್ ಬೆಂಬಲಿಗರು ಕೂಡ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ್ಲಲಿ ಎರಡು ಮೂರು ಕಾರುಗಳು ಜಖಂಗೊಂಡಿದ್ದು, ಕೆಲ ಮಂದಿಗೆ ಹಲ್ಲೆಯಾಗಿದೆ ಎನ್ನಲಾಗಿದೆ.
ಸ್ಥಳಕ್ಕೆ ನಂದಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಗೆ ಕಾಂಗ್ರೆಸ್ ಮುಖಂಡರಾದ ಕುಸುಮಾ ಹಾಗೂ ಹನುಮಂತರಾಯಪ್ಪ ಕಾರಣ ಎಂದು ಆರೋಪಿಸಿರುವ ಮುನಿರತ್ನ ನನ್ನನ್ನು ಕೊಲೆ ಮಾಡಿ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎನ್ನುವ ಉದ್ದೇಶದಿಂದ ಡಿಕೆ ಸುರೇಶ್ ಹಾಗೂ ಡಿಕೆ ಶಿವಕುಮಾರ್ ಯತ್ನಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…