ಬೆಂಗಳೂರು: ಬಿಜೆಪಿ ನಾಯಕರು ಹಾಗೂ ಬಿಜೆಪಿ ಪಕ್ಷದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ಬಂಡಾಯವೆದ್ದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿ ಬಿಗ್ ಶಾಕ್ ನೀಡಿದೆ.
ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಹಾಗೂ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ.
ಈ ಹಿಂದೆಯ ನಿಮಗೆ ಹಲವು ಬಾರಿ ನೋಟಿಸ್ ನೀಡಲಾಗಿದೆ. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಹೆಚ್ಚಾಗುತ್ತಿವೆ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ ಎಂದು ಶೋಕಾಸ್ ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ಈ ನೋಟಿಸ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್ಗೆ ಉತ್ತರ ಕೊಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶಗಳನ್ನು ತಿಳಿಸುತ್ತೇವೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶವಾಯಿ ರಾಜಕೀಯ ಸಂಬಂಧ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…
ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…
ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…