ಕಲಬುರ್ಗಿ: ನಾನು ಸಿಎಂ ಆಗೋಕೆ ಹೋರಾಟ ಮಾಡುತ್ತಿಲ್ಲ. ನಿಮಗ್ಯಾಕೆ ಭಯ ಎಂದು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ದಿನದಿಂದ ದಿನಕ್ಕೆ ಭಿನ್ನಮತ ತಾರಕಕ್ಕೇರಿದ್ದು, ವಕ್ಫ್ ವಿರುದ್ಧ ಜನಜಾಗೃತಿ ಅಭಿಯಾನಕ್ಕೆ ಪ್ರತ್ಯೇಕ ಚಾಲನೆ ನೀಡಿರುವ ಯತ್ನಾಳ್ ಈಗ ಬಿಜೆಪಿ ನಾಯಕರ ವಿರುದ್ಧವೇ ವಾಗ್ದಾಳಿ ಮುಂದುವರಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಶಾಸಕ ಯತ್ನಾಳ್ ಅವರು, ಇಲ್ಲಿ ಯಾರೂ ಕೂಡ ಸಿಎಂ ಆಗಲು ಹೋರಾಟ ಮಾಡುತ್ತಿಲ್ಲ. ನಾವು ವಕ್ಫ್ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಆದ್ರೆ ಈ ಬಗ್ಗೆ ನಿಮಗ್ಯಾಕೆ ಭಯ ಹಾಗೂ ಟೆನ್ಶನ್ ಎಂದು ಬಿ.ಎಸ್.ಯಡಿಯೂರಪ್ಪ ಹಾಗೂ ವಿಜಯೇಂದ್ರರನ್ನು ಪ್ರಶ್ನೆ ಮಾಡಿದ್ದಾರೆ.
ಯಾರೂ ಕೂಡ ವಕ್ಫ್ ವಿರುದ್ಧ ಸ್ವಾರ್ಥಕ್ಕಾಗಿ ಹೋರಾಟ ನಡೆಸುತ್ತಿಲ್ಲ. ಯಾವುದೇ ಕುಟುಂಬವನ್ನು ಮುಗಿಸಲು ಕೂಡ ನಾವು ಹೋರಾಟ ಮಾಡುತ್ತಿಲ್ಲ ಎಂದು ವಿಜಯೇಂದ್ರ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಶಾಸಕ ಯತ್ನಾಳ್ ಅವರು, ನನ್ನ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳುತ್ತಿದ್ದೀರಿ. ಯಾಕೆ ಕ್ರಮ ಕೈಗೊಳ್ತೀರಾ? ಹೋರಾಟ ಮಾಡುವುದರಲ್ಲಿ ಏನು ತಪ್ಪಿದೆ ಎಂದು ಪ್ರಶ್ನೆ ಮಾಡಿದರು.
ಇನ್ನು ವಕ್ಫ್ ವಿರುದ್ಧ ನಡೆಸುತ್ತಿರುವ ಹೋರಾಟದ ಬಗ್ಗೆ ಮಾಹಿತಿ ನೀಡಿದ ಯತ್ನಾಳ್, ನಾವು ಕಲಬುರ್ಗಿ ಬಳಿಕ ಬೆಳಗಾವಿಯಲ್ಲಿ ಬೃಹತ್ ಹೋರಾಟ ಮುಗಿಸಿ ದೆಹಲಿಗೆ ಹೋಗುತ್ತೇವೆ. ಡಿಸೆಂಬರ್.3-4ರಂದು ದೆಹಲಿಗೆ ಹೋಗಿ ವಕ್ಫ್ ವಿರುದ್ಧ ವರದಿ ನೀಡುತ್ತೇವೆ ಎಂದು ಹೇಳಿದರು.
ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಳಿಕ…
ನಂಜನಗೂಡು: ಜಮೀನಿಗೆ ಬೈಕ್ನಲ್ಲಿ ಹೋಗುತ್ತಿದ್ದ ರೈತ ದಂಪತಿಗಳ ಮೇಲೆ ಚಿರತೆ ದಾಳಿ ನಡೆಸಿದ್ದು, ಮಗು ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ…
ಹಿರಿಯ ರಂಗಕರ್ಮಿ ಹೆಗ್ಗೂಡು ಪ್ರಸನ್ನ ನೇತೃತ್ವದಲ್ಲಿ ನಡೆದ ಸಭೆ; ಸುರೇಂದ್ರ ಕೌಲಗಿ ಮತ್ತಿತರರು ಭಾಗಿ ನಂಜನಗೂಡು: ಮಹಾತ್ಮ ಗಾಂಧೀಯವರ ಸರ್ವೋದಯದ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 21ನೇ ಘಟಿಕೋತ್ಸವದ ಸಂಭ್ರಮ ಮನೆಮಾಡಿದ್ದು, ಒಟ್ಟು 8 ಮಂದಿ ಗಣ್ಯರಿಗೆ ಗೌರವ ಡಾಕ್ಟರೇಟ್…
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…