ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ, ಬೆದರಿಕೆ ಹಾಗೂ ಆತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಪೊಲೀಸರ ವಶವಾಗಿದ್ದು, ಅವರಿಗೆ ಸಂಬಂಧಿಸಿದ ಅಕ್ರಮಗಳು ಒಂದಾದ ಮೇಲೊಂದು ಬಯಲಾಗುತ್ತಿವೆ ಎಂಬ ಅಂಶ ಹೊರಬಿದ್ದಿದೆ. ಇದೀಗ ಶಾಸಕ ಮುನಿರತ್ನ ವಿರುದ್ದ ಏಡ್ಸ್ ಹಬ್ಬಿಸುವ ಆರೋಪ ಒಂದು ಕೇಳಿ ಬಂದಿದೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರು, ಬಿಜೆಪಿ ನಾಯಕರಿಗೆ ಹೂ ಗುಚ್ಛ ನೀಡುವ ವೇಳೆ ಎಚ್ಐವಿ ಇಂಜೆಕ್ಟ್ ಮಾಡಲು ಯೋಜನೆ ಹಾಕಿಕೊಂಡಿದ್ದರು ಎಂಬ ಆಘಾತಕಾರಿ ಸುದ್ದಿಯೊಂದು ಕೇಳಿಬಂದಿದೆ. ಎಚ್ಐವಿಅನ್ನು ನಾಯಕರಿಗೆ ʼಎಡ್ಸ್ ರಕ್ತʼದ ಮೂಲಕ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಬಂದಿದೆ.
ಈ ಕುರಿತು ರಾಜ್ಯ ಕಾಂಗ್ರೆಸ್ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಬಿಜೆಪಿ ಶಾಸಕರೆಲ್ಲರೂ ಎಚ್ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ವ್ಯಂಗ್ಯ ಮಾಡಿದೆ.
ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್ ಅವರಿಗೆ ಏಡ್ಸ್ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಆಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತರನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು ಎಚ್ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣದ ಅಭಿಯಾನಕ್ಕೆ ಹಕರಿಸಬೇಕು ಎಂದು ಕಾಂಗ್ರೆಸ್ ವ್ಯಂಗ್ಯವಾಗಿ ಟ್ವೀಟ್ ಮಾಡಿದೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…