ರಾಜ್ಯ

ಬಿಜೆಪಿ ಶಾಸಕರು ಎಚ್‌ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್‌ ನಿಯಂತ್ರಣ ಅಭಿಯಾನಕ್ಕೆ ಸಹಕರಿಸಿ: ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ, ಬೆದರಿಕೆ ಹಾಗೂ ಆತ್ಯಾಚಾರ ಪ್ರಕರಣದಲ್ಲಿ ಮತ್ತೊಮ್ಮೆ ಪೊಲೀಸರ ವಶವಾಗಿದ್ದು, ಅವರಿಗೆ ಸಂಬಂಧಿಸಿದ ಅಕ್ರಮಗಳು ಒಂದಾದ ಮೇಲೊಂದು ಬಯಲಾಗುತ್ತಿವೆ ಎಂಬ ಅಂಶ ಹೊರಬಿದ್ದಿದೆ. ಇದೀಗ ಶಾಸಕ ಮುನಿರತ್ನ ವಿರುದ್ದ ಏಡ್ಸ್‌ ಹಬ್ಬಿಸುವ ಆರೋಪ ಒಂದು ಕೇಳಿ ಬಂದಿದೆ.

ಆರ್‌.ಆರ್‌.ನಗರದ ಬಿಜೆಪಿ ಶಾಸಕ ಮುನಿರತ್ನ ಅವರು, ಬಿಜೆಪಿ ನಾಯಕರಿಗೆ ಹೂ ಗುಚ್ಛ ನೀಡುವ ವೇಳೆ ಎಚ್‌ಐವಿ ಇಂಜೆಕ್ಟ್‌ ಮಾಡಲು ಯೋಜನೆ ಹಾಕಿಕೊಂಡಿದ್ದರು ಎಂಬ ಆಘಾತಕಾರಿ ಸುದ್ದಿಯೊಂದು ಕೇಳಿಬಂದಿದೆ. ಎಚ್‌ಐವಿಅನ್ನು ನಾಯಕರಿಗೆ ʼಎಡ್ಸ್‌ ರಕ್ತʼದ ಮೂಲಕ ಹಬ್ಬಿಸಲು ಪ್ರಯತ್ನಿಸಿದ್ದರು ಎಂಬ ಆರೋಪ ಬಂದಿದೆ.

ಈ ಕುರಿತು ರಾಜ್ಯ ಕಾಂಗ್ರೆಸ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿದ್ದು, ಬಿಜೆಪಿ ಶಾಸಕರೆಲ್ಲರೂ ಎಚ್‌ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್‌ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ವ್ಯಂಗ್ಯ ಮಾಡಿದೆ.

ಮುನಿರತ್ನರ ದ್ವೇಷದ ರಾಜಕೀಯಕ್ಕೆ, ಭ್ರಷ್ಟಾಚಾರಕ್ಕೆ ಗುರಿಯಾದವರಲ್ಲಿ ಬಿಜೆಪಿ ನಾಯಕರೂ ಹೊರತಾಗಿಲ್ಲ. ಮಾಧ್ಯಮ ವರದಿಗಳ ಪ್ರಕಾರ ಸ್ವತಃ ಬಿಜೆಪಿ ನಾಯಕ ಅಶೋಕ್‌ ಅವರಿಗೆ ಏಡ್ಸ್‌ ಸೋಂಕು ತಗುಲಿಸಲು ಪ್ರಯತ್ನಿಸಿದ್ದ ಆಘಾತಕಾರಿ ಸಂಗತಿ ಹೊರಬಂದಿದೆ. ಇಂತಹ ವಿಕೃತರತರನ್ನು ತಲೆ ಮೇಲೆ ಹೊತ್ತು ಮೆರೆಸುವ ಬಿಜೆಪಿ ಪಕ್ಷದ ನಾಯಕರು ಎಚ್‌ಐವಿ ಪರೀಕ್ಷೆ ಮಾಡಿಸಿಕೊಂಡು ಏಡ್ಸ್‌ ನಿಯಂತ್ರಣದ ಅಭಿಯಾನಕ್ಕೆ ಹಕರಿಸಬೇಕು ಎಂದು ಕಾಂಗ್ರೆಸ್‌ ವ್ಯಂಗ್ಯವಾಗಿ ಟ್ವೀಟ್‌ ಮಾಡಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

18 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

26 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago