ರಾಜ್ಯ

ಸ್ಪೀಕರ್‌ ಯು.ಟಿ.ಖಾದರ್‌ ಜೊತೆ ಜಗಳಕ್ಕಿಳಿದ ಬಿಜೆಪಿ ಶಾಸಕರು

ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್‌ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು.

ಈ ವೇಳೆ ಸ್ಪೀಕರ್‌ ಯು.ಟಿ.ಖಾದರ್‌ ಅವರು, ಸದನವನ್ನು ಸ್ವಲ್ಪ ಸಮಯ ಮುಂದೂಡಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಸ್ಪೀಕರ್‌ ಜೊತೆಯೇ ಜಗಳಕ್ಕಿಳಿದರು. ಅಲ್ಲದೇ ಸ್ಪೀಕರ್‌ ಕಛೇರಿಯ ಟೇಬಲ್‌ ಗುದ್ದಿ ಏರು ಧ್ವನಿಯಲ್ಲಿ ಜಗಳವಾಡಿದರು.

ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್‌.ಆಶೋಕ್‌, ಶಾಸಕ ಸುನೀಲ್‌ ಕುಮಾರ್‌, ಅರವಿಂದ್‌ ಬೆಲ್ಲದ್‌, ಸಿದ್ದು ಸವದಿ, ಸುರೇಶ್‌ ಗೌಡ ಸೇರಿದಂತೆ ಇನ್ನಿತರ ಸದಸ್ಯರು ಸ್ಪೀಕರ್‌ ಜೊತೆ ವಾಗ್ವಾದ ನಡೆಸುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರು ಯು.ಟಿ ಖಾದರ್‌ ಪರ ನಿಂತರು. ಹೀಗಾಗಿ ಎರಡೂ ಕಡೆ ವಾದ-ಪ್ರತಿವಾದಗಳು ಜಾಸ್ತಿಯಾಗಿ ಸ್ಪೀಕರ್‌ ಕಚೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ವಿಜಯಾನಂದ್‌ ಕಾಶಪ್ಪನವರ್‌ ಅವರು ಮಾತನಾಡುವ ವೇಳೆ ಪಂಚಮಸಾಲಿ ಹೋರಾಟಕ್ಕೆ ಸಂಬಂಧಿಸಿದಂತೆ ಇದು ಆರ್‌ಎಸ್‌ಎಸ್‌ ಪ್ರೇರಿತ ಕಲ್ಲತೂರಾಟ ಎಂದು ಹೇಳಿದರು. ಇದಕ್ಕೆ ಕೋಪಗೊಂಡ ಬಿಜೆಪಿ ಶಾಸಕರು ಕಾಶಪ್ಪನವರ್‌ ಹೇಳಿಕೆಯನ್ನು ಖಂಡಿಸಿ ಏರು ಧ್ವನಿಯಲ್ಲಿ ಮಾತನಾಡಿದರು.

ಸ್ಪೀಕರ್‌ ಜೊತೆಗಿನ ಜಗಳಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್‌, ಸ್ಪೀಕರ್‌ ಕಾಂಗ್ರೆಸ್‌ ಏಜೆಂಟ್‌ ರೀತಿ ವರ್ತಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಹಾಗೂ ಇನ್ನಿತರರು ಆರ್‌ಎಸ್ಎಸ್‌‌ ಬಗ್ಗೆ ಮಾತನಾಡದೆ ಇದ್ದರೆ ಅವರಿಗೆ ತಿಂದ ಅನ್ನ ಕರಗುವುದಿಲ್ಲ ಅನ್ನಿಸುತ್ತದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

 

ಆಂದೋಲನ ಡೆಸ್ಕ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

4 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

5 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

5 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

5 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

5 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

5 hours ago