ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು.
ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು, ಸದನವನ್ನು ಸ್ವಲ್ಪ ಸಮಯ ಮುಂದೂಡಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಸ್ಪೀಕರ್ ಜೊತೆಯೇ ಜಗಳಕ್ಕಿಳಿದರು. ಅಲ್ಲದೇ ಸ್ಪೀಕರ್ ಕಛೇರಿಯ ಟೇಬಲ್ ಗುದ್ದಿ ಏರು ಧ್ವನಿಯಲ್ಲಿ ಜಗಳವಾಡಿದರು.
ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಆಶೋಕ್, ಶಾಸಕ ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಇನ್ನಿತರ ಸದಸ್ಯರು ಸ್ಪೀಕರ್ ಜೊತೆ ವಾಗ್ವಾದ ನಡೆಸುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಯು.ಟಿ ಖಾದರ್ ಪರ ನಿಂತರು. ಹೀಗಾಗಿ ಎರಡೂ ಕಡೆ ವಾದ-ಪ್ರತಿವಾದಗಳು ಜಾಸ್ತಿಯಾಗಿ ಸ್ಪೀಕರ್ ಕಚೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ವಿಜಯಾನಂದ್ ಕಾಶಪ್ಪನವರ್ ಅವರು ಮಾತನಾಡುವ ವೇಳೆ ಪಂಚಮಸಾಲಿ ಹೋರಾಟಕ್ಕೆ ಸಂಬಂಧಿಸಿದಂತೆ ಇದು ಆರ್ಎಸ್ಎಸ್ ಪ್ರೇರಿತ ಕಲ್ಲತೂರಾಟ ಎಂದು ಹೇಳಿದರು. ಇದಕ್ಕೆ ಕೋಪಗೊಂಡ ಬಿಜೆಪಿ ಶಾಸಕರು ಕಾಶಪ್ಪನವರ್ ಹೇಳಿಕೆಯನ್ನು ಖಂಡಿಸಿ ಏರು ಧ್ವನಿಯಲ್ಲಿ ಮಾತನಾಡಿದರು.
ಸ್ಪೀಕರ್ ಜೊತೆಗಿನ ಜಗಳಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಸ್ಪೀಕರ್ ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಹಾಗೂ ಇನ್ನಿತರರು ಆರ್ಎಸ್ಎಸ್ ಬಗ್ಗೆ ಮಾತನಾಡದೆ ಇದ್ದರೆ ಅವರಿಗೆ ತಿಂದ ಅನ್ನ ಕರಗುವುದಿಲ್ಲ ಅನ್ನಿಸುತ್ತದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…