ಬೆಳಗಾವಿ: ಪಂಚಮಸಾಲಿ ಲಿಂಗಾಯತ ಪ್ರತಿಭಟನಕಾರರ ಮೇಲೆ ಲಾಠಿ ಚಾರ್ಜ್ಗೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ನಲ್ಲಿ ಚರ್ಚೆಗೆ ಅವಕಾಶ ನಿರಾಕರಿಸಿದ ಕಾರಣ ಸದನದಲ್ಲಿ ಬಿಜೆಪಿ ಶಾಸಕರು ಹಾಗೂ ಆಡಳಿತ ಪಕ್ಷದ ಶಾಸಕರ ನಡುವೆ ತೀವ್ರ ಕಾದಾಟ ಏರ್ಪಟ್ಟಿತು.
ಈ ವೇಳೆ ಸ್ಪೀಕರ್ ಯು.ಟಿ.ಖಾದರ್ ಅವರು, ಸದನವನ್ನು ಸ್ವಲ್ಪ ಸಮಯ ಮುಂದೂಡಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ಸ್ಪೀಕರ್ ಜೊತೆಯೇ ಜಗಳಕ್ಕಿಳಿದರು. ಅಲ್ಲದೇ ಸ್ಪೀಕರ್ ಕಛೇರಿಯ ಟೇಬಲ್ ಗುದ್ದಿ ಏರು ಧ್ವನಿಯಲ್ಲಿ ಜಗಳವಾಡಿದರು.
ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಆಶೋಕ್, ಶಾಸಕ ಸುನೀಲ್ ಕುಮಾರ್, ಅರವಿಂದ್ ಬೆಲ್ಲದ್, ಸಿದ್ದು ಸವದಿ, ಸುರೇಶ್ ಗೌಡ ಸೇರಿದಂತೆ ಇನ್ನಿತರ ಸದಸ್ಯರು ಸ್ಪೀಕರ್ ಜೊತೆ ವಾಗ್ವಾದ ನಡೆಸುತ್ತಿದ್ದರು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ಯು.ಟಿ ಖಾದರ್ ಪರ ನಿಂತರು. ಹೀಗಾಗಿ ಎರಡೂ ಕಡೆ ವಾದ-ಪ್ರತಿವಾದಗಳು ಜಾಸ್ತಿಯಾಗಿ ಸ್ಪೀಕರ್ ಕಚೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.
ವಿಜಯಾನಂದ್ ಕಾಶಪ್ಪನವರ್ ಅವರು ಮಾತನಾಡುವ ವೇಳೆ ಪಂಚಮಸಾಲಿ ಹೋರಾಟಕ್ಕೆ ಸಂಬಂಧಿಸಿದಂತೆ ಇದು ಆರ್ಎಸ್ಎಸ್ ಪ್ರೇರಿತ ಕಲ್ಲತೂರಾಟ ಎಂದು ಹೇಳಿದರು. ಇದಕ್ಕೆ ಕೋಪಗೊಂಡ ಬಿಜೆಪಿ ಶಾಸಕರು ಕಾಶಪ್ಪನವರ್ ಹೇಳಿಕೆಯನ್ನು ಖಂಡಿಸಿ ಏರು ಧ್ವನಿಯಲ್ಲಿ ಮಾತನಾಡಿದರು.
ಸ್ಪೀಕರ್ ಜೊತೆಗಿನ ಜಗಳಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಸ್ಪೀಕರ್ ಕಾಂಗ್ರೆಸ್ ಏಜೆಂಟ್ ರೀತಿ ವರ್ತಿಸುತ್ತಿದ್ದಾರೆ. ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಹಾಗೂ ಇನ್ನಿತರರು ಆರ್ಎಸ್ಎಸ್ ಬಗ್ಗೆ ಮಾತನಾಡದೆ ಇದ್ದರೆ ಅವರಿಗೆ ತಿಂದ ಅನ್ನ ಕರಗುವುದಿಲ್ಲ ಅನ್ನಿಸುತ್ತದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…