ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ಒಂದು ಗಂಟೆಗಳ ಕಾಲ ವಿಚಾರಣೆ ಎದುರಿಸಿ ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಸಂವಿಧಾನಿಕ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದರು.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ʼಪ್ರಾಸ್ಟಿಟ್ಯೂಡ್ʼ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಬೆಳಗಾವಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿಯಿಡಿ ಸುತ್ತಾಡಿಸಿದ ಬಗ್ಗೆ ಚರ್ಚೆಯಾಗಿತ್ತು. ನಂತರ ಸಿ.ಟಿ.ರವಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಇದಾದ ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಈಗ ವಿಚಾರಣೆಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗ ಹಾಜರಾಗಿದ್ದ ಸಿ.ಟಿ.ರವಿ ಅವರು, ಘಟನೆಯ ವೇಳೆ ಯಾರೆಲ್ಲಾ ಇದ್ದರು ಎಂಬುದರ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ನನ್ನ ಮೇಲೆ ಸುವರ್ಣಸೌಧದಲ್ಲಿ ಹಲ್ಲೆಗೆ ಯತ್ನ ನಡೆದಿತ್ತು. ಅದರ ಬಗ್ಗೆ ವಿಚಾರಣೆ ಇತ್ತು. ಹಲ್ಲೆ ನಡೆದಿರುವ ಬಗ್ಗೆ ಸಿಸಿ ಕ್ಯಾಮರಾದಲ್ಲೂ ದಾಖಲೆಗಳಿವೆ. ಕ್ಯಾಮರಾ ಫೂಟೇಜ್ ನೀಡಿದರೆ ಗುರುತಿಸುವುದಾಗಿ ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…