ಚಿಕ್ಕಮಗಳೂರು: ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರನ್ನು ನಾನು ರಾಷ್ಟ್ರೀಯ ನಾಯಕನೆಂದು ತಿಳಿದುಕೊಂಡಿದ್ದೆ. ಆದರೆ, ಅವರು ದೊಡ್ಡ ಡ್ರಾಮಾ ಮಾಡುವ ಮಾಸ್ಟರ್ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಬಳಿ ಕ್ಷಮೆ ಕೇಳುತ್ತೇನೆ ಎಂದರೆ ಮುಗಿದು ಹೋಗುತ್ತಿತ್ತು. ಆದರೆ ಅವರ ನಡವಳಿಕೆ ಆಚಾರ-ವಿಚಾರ ನೋಡಿದರೆ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ. ಬೇರೆ ಯಾರು ಒಪ್ಪುವುದೇ ಬೇಡ, ಅತ್ಮಸಾಕ್ಷಿ ಕೇಳಿದರೆ ಸಾಕಿತ್ತು. ರವಿ ಹೀಗೆ ಮಾತನಾಡಬಾರದಿತ್ತು ಎಂದು ಬಿಜೆಪಿಯ ನಾಯಕರೇ ಹೇಳಿದ್ದಾರೆ ಎಂದು ಸಿ.ಟಿ.ರವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಅವರು, ನನಗೆ ಯಾರ ಬೆಂಬಲವು ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗುವುದು ಬೇಡ. ದೇವಸ್ಥಾನಕ್ಕೆ ಹೋಗುವುದನ್ನು ಟೆಂಪಲ್ ರನ್ ಎಂದರೆ ದೇವಸ್ಥಾನಕ್ಕೆ ಬೀಗ ಹಾಕಿಸಿ ಎಂದು ಹೇಳಿದ್ದಾರೆ.
ನಾನು ದೇವರು, ಧರ್ಮದ ಮೇಲೆ ನಂಬಿಕೆ ಇಟ್ಟವನು ಹಾಗಾಗಿ ಪೂಜೆ ಮಾಡುತ್ತೇನೆ. ಅವರವರ ನಂಬಿಕೆ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.
ಪಕ್ಷದಲ್ಲಿ ಹೈಕಮಾಂಡ್ ಹೇಳಿದ್ದೆ ಅಂತಿಮ. ರಾಜಕೀಯದಲ್ಲಿ ತಿರುವು ಎನ್ನುವ ಮಾತು ಗೌಣ. ಎಲ್ಲಾರು ಒಟ್ಟಾಗಿ ಸೇರಿ ಕೆಲಸ ಮಾಡೋಣ. ಫಲಾಫಲ ದೇವರಿಗೆ ಬಿಡೋಣ ಎಂದು ಹೇಳಿದ್ದಾರೆ.
ಕೊಳ್ಳೇಗಾಲ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸುತ್ತಮುತ್ತಲಿನ ಅನೇಕ ಗ್ರಾಮಗಳಿಂದ ಅನಾರೋಗ್ಯಕ್ಕೊಳಗಾದವರು ಚಿಕಿತ್ಸೆ ಪಡೆಯಲು ಬರುತ್ತಾರೆ. ಆದರೆ…
2023ರಿಂದ "ಮಾತೋಶ್ರೀ ಫೌಂಡೇಶನ್"ಯಡಿ ಈ ಕಾರ್ಯಕ್ರಮಕ್ಕೆ ಚಾಲನೆ ಭಾನುವಾರ ಬಂತೆಂದರೆ ಸಾಮಾನ್ಯವಾಗಿ ಹೆಚ್ಚಿನ ಮಧ್ಯಮ ವರ್ಗದ ಮನೆಗಳಲ್ಲಿ ಅಡುಗೆ ಕೋಣೆಗಳು…
ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…
ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…
ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…