ರಾಜ್ಯ

ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವ್ಯಂಗ್ಯ

ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ನಾನು ರಾಷ್ಟ್ರೀಯ ನಾಯಕನೆಂದು ತಿಳಿದುಕೊಂಡಿದ್ದೆ. ಆದರೆ, ಅವರು ದೊಡ್ಡ ಡ್ರಾಮಾ ಮಾಡುವ ಮಾಸ್ಟರ್‌ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ.

ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಬಳಿ ಕ್ಷಮೆ ಕೇಳುತ್ತೇನೆ ಎಂದರೆ ಮುಗಿದು ಹೋಗುತ್ತಿತ್ತು. ಆದರೆ ಅವರ ನಡವಳಿಕೆ ಆಚಾರ-ವಿಚಾರ ನೋಡಿದರೆ ಈ ಮಟ್ಟಕ್ಕೆ ಇಳಿಯುತ್ತಾರೆ ಎಂದು ಭಾವಿಸಿರಲಿಲ್ಲ. ಬೇರೆ ಯಾರು ಒಪ್ಪುವುದೇ ಬೇಡ, ಅತ್ಮಸಾಕ್ಷಿ ಕೇಳಿದರೆ ಸಾಕಿತ್ತು. ರವಿ ಹೀಗೆ ಮಾತನಾಡಬಾರದಿತ್ತು ಎಂದು ಬಿಜೆಪಿಯ ನಾಯಕರೇ ಹೇಳಿದ್ದಾರೆ ಎಂದು ಸಿ.ಟಿ.ರವಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಇನ್ನು ರಾಜ್ಯದಲ್ಲಿ ತೀವ್ರ ಚರ್ಚೆಯಾಗುತ್ತಿರುವ ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಅವರು, ನನಗೆ ಯಾರ ಬೆಂಬಲವು ಬೇಡ, ನನಗಾಗಿ ಯಾವ ನಾಯಕರು, ಶಾಸಕರು, ಬೆಂಬಲಿಗರು ಕೂಗುವುದು ಬೇಡ. ದೇವಸ್ಥಾನಕ್ಕೆ ಹೋಗುವುದನ್ನು ಟೆಂಪಲ್‌ ರನ್‌ ಎಂದರೆ ದೇವಸ್ಥಾನಕ್ಕೆ ಬೀಗ ಹಾಕಿಸಿ ಎಂದು ಹೇಳಿದ್ದಾರೆ.

ನಾನು ದೇವರು, ಧರ್ಮದ ಮೇಲೆ ನಂಬಿಕೆ ಇಟ್ಟವನು ಹಾಗಾಗಿ ಪೂಜೆ ಮಾಡುತ್ತೇನೆ. ಅವರವರ ನಂಬಿಕೆ ಆಚಾರ-ವಿಚಾರ ಅವರಿಗೆ ಬಿಟ್ಟದ್ದು ಎಂದು ತಿಳಿಸಿದರು.

ಪಕ್ಷದಲ್ಲಿ ಹೈಕಮಾಂಡ್‌ ಹೇಳಿದ್ದೆ ಅಂತಿಮ. ರಾಜಕೀಯದಲ್ಲಿ ತಿರುವು ಎನ್ನುವ ಮಾತು ಗೌಣ. ಎಲ್ಲಾರು ಒಟ್ಟಾಗಿ ಸೇರಿ ಕೆಲಸ ಮಾಡೋಣ. ಫಲಾಫಲ ದೇವರಿಗೆ ಬಿಡೋಣ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

8 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

8 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

8 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago