ಬೆಂಗಳೂರು: ಕಾಂಗ್ರೆಸ್ ಪಕ್ಷ ಇನ್ನಾದರೂ ತನ್ನ ಭ್ರಷ್ಟಾಚಾರ ಹಾಗೂ ಲೂಟಿಯನ್ನು ನಿಲ್ಲಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಿಡಿಕಾರಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್ ಪಕ್ಷ ನಡೆ ಖಂಡಿಸಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್ಸಿ ಸಿ.ಟಿ.ರವಿ ಅವರು, ಶೌಚಾಲಯಗಳ ಮೇಲೆ ತೆರಿಗೆ ಹಾಕಿರುವ ಕಾಂಗ್ರೆಸ್ ಪಕ್ಷದ ನಡೆ ಸರಿಯಲ್ಲ. ಉಪ್ಪಿನ ಮೇಲೆ ತೆರಿಗೆ ಹಾಕಿದ್ದಾಗ ಮಹಾತ್ಮ ಗಾಂಧಿ ಹೋರಾಟ ಮಾಡಿದ್ದರು. ಇವತ್ತು ಶೌಚಾಲಯಗಳ ಮೇಲೆ ತೆರಿಗೆ ಹಾಕಿದ್ರೂ ಕಾಂಗ್ರೆಸ್ನವರು ಸುಮ್ಮನಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದೆಲ್ಲವನ್ನು ನೋಡಿಕೊಂಡು ಜನರು ಎಷ್ಟು ದಿನ ಸುಮ್ಮನಿರುತ್ತಾರೆ? ಸರಿಯಾದ ಸಮಯದಲ್ಲಿ ತಕ್ಕ ಉತ್ತರ ಕೊಡುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಇನ್ನು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬಗ್ಗೆ ಮಾತನಾಡಿದ ಅವರು, ಕೆಜಿಗಟ್ಟಲೇ ಚಿನ್ನ ಸಾಗಿಸೋದು ಸಾಮಾನ್ಯ ಆಗಿಬಿಟ್ಟಿದೆ. ಇದು ಕಳ್ಳರ ಸರ್ಕಾರ ಎಂದು ಕಿಡಿಕಾರಿದರು.
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…