ರಾಜ್ಯ

ಎಂಎಲ್‌ಸಿ ಚುನಾವಣೆ| ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಆರರಲ್ಲಿ ಜೆಡಿಎಸ್‌ ಪಾಲಾದದ್ದು ಕೇವಲ 1

ಬೆಂಗಳೂರು: ವಿಧಾನ ಪರಿಷತ್‌ನ ಪದವೀಧರರ, ಶಿಕ್ಷಕರ ಕ್ಷೇತ್ರಗಳಿಗೆ ಇದೇ ಜೂನ್‌.3 ರಂದು ಚುನಾವಣೆ ನಡಯಲಿದೆ. ಈ ಸಂಬಂಧ ಬಿಜೆಪಿ ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್‌ ಹಾಗೂ ಬಿಜೆಪಿ ವಿಧಾನ ಪರಿಷತ್‌ ಚುನಾವಣೆಗೂ ತಮ್ಮ ಮೈತ್ರಿಯನ್ನು ಮುಂದುವರೆಸಿದೆ. ಇನ್ನು ಒಟ್ಟು 6 ಕ್ಷೇತ್ರಗಳ ಪೈಕಿ ಕೇವಲ 1 ಕ್ಷೇತ್ರವನ್ನು ಮಾತ್ರ ಬಿಜೆಪಿ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

ನೈಋತ್ಯ ಶಿಕ್ಷಕರ ಕ್ಷೇತ್ರದಿಂದ ಈ ಬಾರಿ ಜೆಡಿಎಸ್‌ ಸ್ಪರ್ಧೆ ಮಾಡಲಿದೆ. ಇನ್ನು ಬಿಜೆಪಿಯಿಂದ ವಿಧಾನಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರ್‌ನಾಥ್‌ ಪಾಟೀಲ್‌, ನೈಋತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರದಿಂದ ಅ. ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ ನಾರಾಯಣ ಸ್ವಾಮಿ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ ನಿಂಗರಾಜು ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಜೆಪಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನಂಜನಗೂಡಿನಲ್ಲಿ ಮುಂದುವರಿದ ಕಳ್ಳರ ಹಾವಳಿ: ಶಿಕ್ಷಕ ದಂಪತಿ ಮನೆಯಲ್ಲಿ ಕಳ್ಳತನ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಳ್ಳರ ಹಾವಳಿ ಮುಂದುವರಿದಿದ್ದು, ಸೂರ್ಯೋದಯ ನಗರ ಬಡಾವಣೆಯಲ್ಲಿ ಖದೀಮರು ತಮ್ಮ ಕೈಚಳಕ ತೋರಿಸಿದ್ದಾರೆ. ಮುಸುಕುಧಾರಿ…

4 mins ago

ಓದುಗರ ಪತ್ರ:  ನೀರಿನ ಪೈಪ್ ದುರಸ್ತಿ ಮಾಡಿ

ಮೈಸೂರಿನ ಲಷ್ಕರ್ ಮೊಹಲ್ಲಾದ ವೀರನಗೆರೆ ಮಾರಿಗುಡಿ ಸ್ಥಳದಲ್ಲಿ ಕುಡಿಯುವ ನೀರಿನ ಪೈಪು ಒಡೆದಿದ್ದು, ದುರಸ್ತಿ ಮಾಡಿದರೂ ಕಳಪೆ ಕಾಮಗಾರಿಯಿಂದಾಗಿ ಮತ್ತೆ…

13 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಕ್ರಮ ಅಗತ್ಯ

ಕಳೆದ ೧೫ ವರ್ಷಗಳಲ್ಲಿ ರಾಜ್ಯದ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ೧೭ ಲಕ್ಷ ದಷ್ಟು(ಶೇ.೩೦) ಕಡಿಮೆಯಾಗಿರುವುದರ ಬಗ್ಗೆ ವಿಧಾನ…

15 mins ago

ಓದುಗರ ಪತ್ರ:  ಮತದಾರರ ಪಟ್ಟಿ ಮ್ಯಾಪಿಂಗ್; ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ

ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…

20 mins ago

ಓದುಗರ ಪತ್ರ: ಫ್ರಾಂಚೈಸಿ ವಂಚನೆ; ಜಾಗೃತಿ ಅಗತ್ಯ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ…

48 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…

55 mins ago