ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.
ಇನ್ನು ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರ್ಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು.
ಇದು ಮಹಾತ್ಮ ಗಾಂಧಿಯವರು ಕಾಲದ ಕಾಂಗ್ರೆಸ್ ಪಕ್ಷ ಅಲ್ಲ. ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ. ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕೆ ಮಾಡಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…