ರಾಜ್ಯ

ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು?: ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.

ಇನ್ನು ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರ್ಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು.

ಇದು ಮಹಾತ್ಮ ಗಾಂಧಿಯವರು ಕಾಲದ ಕಾಂಗ್ರೆಸ್‌ ಪಕ್ಷ ಅಲ್ಲ. ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್‌ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ. ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕೆ ಮಾಡಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

1 hour ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

10 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

20 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago