ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರ್ಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು.
ಇನ್ನು ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರ್ಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು.
ಇದು ಮಹಾತ್ಮ ಗಾಂಧಿಯವರು ಕಾಲದ ಕಾಂಗ್ರೆಸ್ ಪಕ್ಷ ಅಲ್ಲ. ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ. ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕೆ ಮಾಡಿದರು.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…