ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.
ಮಾನವಹಕ್ಕುಗಳ ಆಯೋಗಕ್ಕೆ ಇ-ಮೇಲ್ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದು, ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿಯಾಗಿರುವ ಬಗ್ಗೆ ಆರೋಪಿಸಿದ್ದಾರೆ.
ಕಾನೂನು ಬಾಹೀರ ಬಂಧನ, ಕಿಡ್ನಾಪ್, ನಕಲಿ ಎಫ್ಐಆರ್ ಕಸ್ಟಡಿಯಲ್ಲಿ ಟಾರ್ಚರ್ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ತಲೆಗೆ ರಕ್ತ ಬಂದಿರುವ ವಿಚಾರ ಕೂಡ ದೂರಿನಲ್ಲಿ ಉಲ್ಲೇಖಿಸಿದ್ದು, ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣವಾಗಿ ವಿವರಿಸಿ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಘಟನೆಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ. DG & iGP, ಬೆಳಗಾವಿ ಪೊಲೀಸ್ ಆಯುಕ್ತರಾದ ಲಾಡಾ ಮಾರ್ಟೀನ್, SP ಭೀಮಾಶಂಕರ್ ಗುಳೇದ್ ನೇರವಾಗಿ ಘಟನೆಗೆ ಕಾರಣ ಎಂದು ಸಿಟಿ ರವಿ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹಸಚಿವ ಡಾ.ಜಿ.ಪರಮೇಶ್ವರ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರನ್ನು ಸಹ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ತಮಗೆ ಅಪಾಯವಿದ್ದು, ಕೇಂದ್ರೀಯ ಸಶಸ್ತ್ರ ಭದ್ರತೆಯನ್ನ ಒದಗಿಸುವಂತೆ ದೂರಿನಲ್ಲಿ ಸಿ.ಟಿ.ರವಿ ಮನವಿ ಮಾಡಿದ್ದಾರೆ. ಪ್ರತಿಯೊಬ್ಬ ಅಪರಾಧಿಗೂ ಶಿಕ್ಷೆ ಆಗಬೇಕು. ಈ ಮೂಲಕ ಪೊಲೀಸ್ ಇಲಾಖೆಯಲ್ಲಿ ಶಿಸ್ತು ಮೂಡುವಂತಾಗಬೇಕು. ಮತ್ತೆ ಈ ರೀತಿಯ ಪೊಲೀಸ್ ದೌರ್ಜನ್ಯ ಮರುಕಳಿಸಬಾರದು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…