ರಾಜ್ಯ

ಬಂಧನದ ಭೀತಿಯಲ್ಲಿದ್ದ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಮಧ್ಯಂತರ ಜಾಮೀನು

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್‌ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದಿಂದ ರವಿಕುಮಾರ್ ಬಂಧನದ ಭೀತಿಯಿಂದ ತಾತ್ಕಾಲಿಕ ಪಾರಾಗಿದ್ದಾರೆ.

ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್, ಅರ್ಜಿದಾರರು ವಿಚಾರಣೆಗೆ ಸಹಕರಿಸಿದಲ್ಲಿ ಬಲವಂತದ ಕ್ರಮ ಬೇಡ ಎಂದು ತಿಳಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ದೂರು ನೀಡಿರುವ ಮಹಿಳೆ ವಿದ್ಯುನ್ಮಾನ ಮಾಧ್ಯಮದಲ್ಲಿ ನೋಡಿರುವುದಾಗಿ ದೂರಿನಲ್ಲಿ ವಿವರಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲು ಮುಂದಾದ ಸಂದರ್ಭದಲ್ಲಿ ಅವರು ಸರಿಯಾಗಿ ಸ್ಪಂದಿಸಿಲ್ಲ. ಈ ಕಾರಣದಿಂದ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿದರು.

ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದ ಮಂಡಿಸಿ ರವಿಕುಮರ್ 2ನೇ ಬಾರಿ ಹೀಗೆ ಮಾತನಾಡ್ತಿದ್ದಾರೆ. ಈ ಹಿಂದೆ ಮಹಿಳಾ ಜಿಲ್ಲಾಧಿಕಾರಿಯೊಬ್ಬರನ್ನ ಪಾಕಿಸ್ತಾನದ ಸಹೋದರಿ ಅಂದಿದ್ರು. ನಾವು ಇಲ್ಲಿ ಡಿಸೈಡ್ ಮಾಡೋದಕ್ಕೆ ಬರೋದಿಲ್ಲ, ತನಿಖೆ ಆಗಲಿ, ಎಫ್‌ಐಆರ್ ಆಗಿ 24 ಗಂಟೆ ಕಳೆದಿಲ್ಲ ಆಗಲೇ ಕೋರ್ಟ್‌ಗೆ ಬಂದಿದ್ದಾರೆ. ವಿಕ್ಟಿಮ್ ಮುಖ್ಯ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಬೇಕಿದೆ. ಮಾಧ್ಯಮಗಳ ಹೇಳಿಕೆಯನ್ನೂ ದಾಖಲಾಸಲಾಗುತ್ತೆ, ಇದೊಂದು ಏಳು ವರ್ಷಗಳವರೆಗಿನ ಸಜೆಯುಳ್ಳ ಕೇಸ್ ಆಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಇಲ್ಲಿ ರಕ್ಷಣೆ ಕೋರೋದು ಸರಿಯಿಲ್ಲ. ಐಎಎಸ್ ಅಧಿಕಾರಿಗಳು ಇವ್ರ ವಿರುದ್ಧ ಪ್ರತಿಭಟಿಸ್ತಿದ್ದಾರೆ ಅಂತ ವಾದ ಮಂಡಿಸಿದರು.

ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಅಂತ ಅಭಿಪ್ರಾಯ ಪಟ್ಟ ನ್ಯಾಯಾಧೀಶರು, ಜುಲೈ 8ರ ವರೆಗೆ ಬಂಧಿಸದಂತೆ, ತನಿಖೆಗೆ ಸಹಕಾರ ನೀಡುವಂತೆ ಆದೇಶ ನೀಡಿದ್ರು. ಇನ್ನು ಸಂಜೆ ವೇಳೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದರು.

ಆಂದೋಲನ ಡೆಸ್ಕ್

Recent Posts

ಕೆ.ಜೆ.ಜಾರ್ಜ್‌ ರಾಜೀನಾಮೆ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಇಂಧನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಹಸ್ತಕ್ಷೇಪಕ್ಕೆ ಬೇಸತ್ತು ಇಂಧನ ಸಚಿವ ಕೆ.ಜೆ.ಜಾರ್ಜ್‌ ರಾಜೀನಾಮೆ ನೀಡಿದ್ದರು ಎಂಬ…

1 hour ago

ವಿಕಲಚೇತನರಿಗಾಗಿಯೇ ಬೃಹತ್‌ ಉದ್ಯೋಗ ಮೇಳ ಆಯೋಜನೆ: ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್…

1 hour ago

ಕೊಡಗಿನಲ್ಲಿ ಮುಂದುವರೆದ ಆನೆ–ಮಾನವ ಸಂಘರ್ಷ: ಕಾಡಾನೆ ದಾಳಿಗೆ ವ್ಯಕ್ತಿ ದಾರುಣ ಸಾವು

ಕೊಡಗು: ಜಿಲ್ಲೆಯಲ್ಲಿ ಆನೆ–ಮಾನವ ಸಂಘರ್ಷ ಮತ್ತೆ ಜೀವ ಬಲಿ ಪಡೆದಿದೆ. ಸಿದ್ದಾಪುರ ಸಮೀಪದ ಗೌರಿ ಬೆಟ್ಟ ಬಳಿ ಕಾಡಾನೆ ದಾಳಿಗೆ…

1 hour ago

ವಿಮಾನ ದುರಂತದಲ್ಲಿ ಅಜಿತ್‌ ಪವಾರ್‌ ಸಾವು ಪ್ರಕರಣ: ದುರಂತದ ಸಂಪೂರ್ಣ ತನಿಖೆಯಾಗಲಿದೆ ಎಂದ ಯದುವೀರ್‌ ಒಡೆಯರ್‌

ಮಡಿಕೇರಿ: ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಕತೆ ಕಟ್ಟುತ್ತಿದ್ದಾರೆ ಎಂದು…

2 hours ago

ಶಾಲಾ ವಾಹನವನ್ನು ಅಟ್ಟಿಸಿಕೊಂಡು ಬಂದ ಒಂಟಿ ಸಲಗ: ಭಯಭೀತರಾದ ವಿದ್ಯಾರ್ಥಿಗಳು

ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಶಾಲಾ ಬಸ್ಸನ್ನು ಒಂಟಿ ಸಲಗ ಅಟ್ಟಿಸಿಕೊಂಡು ಬಂದ ಘಟನೆ…

2 hours ago

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

3 hours ago