ರಾಜ್ಯ

ಬಂಧನದ ಭೀತಿಯಲ್ಲಿದ್ದ ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಮಧ್ಯಂತರ ಜಾಮೀನು

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್‌ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದಿಂದ ರವಿಕುಮಾರ್ ಬಂಧನದ ಭೀತಿಯಿಂದ ತಾತ್ಕಾಲಿಕ ಪಾರಾಗಿದ್ದಾರೆ.

ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್, ಅರ್ಜಿದಾರರು ವಿಚಾರಣೆಗೆ ಸಹಕರಿಸಿದಲ್ಲಿ ಬಲವಂತದ ಕ್ರಮ ಬೇಡ ಎಂದು ತಿಳಿಸಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಂ, ಇದೊಂದು ರಾಜಕೀಯ ಪ್ರೇರಿತ ಪ್ರಕರಣ. ದೂರು ನೀಡಿರುವ ಮಹಿಳೆ ವಿದ್ಯುನ್ಮಾನ ಮಾಧ್ಯಮದಲ್ಲಿ ನೋಡಿರುವುದಾಗಿ ದೂರಿನಲ್ಲಿ ವಿವರಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಲು ಮುಂದಾದ ಸಂದರ್ಭದಲ್ಲಿ ಅವರು ಸರಿಯಾಗಿ ಸ್ಪಂದಿಸಿಲ್ಲ. ಈ ಕಾರಣದಿಂದ ನೀಡಿರುವ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಲಾಗಿದೆ. ಹೀಗಾಗಿ ಪ್ರಕರಣಕ್ಕೆ ತಡೆ ನೀಡಬೇಕು ಎಂದು ಕೋರಿದರು.

ಎಸ್‌ಪಿಪಿ ಬೆಳ್ಳಿಯಪ್ಪ ಪ್ರತಿವಾದ ಮಂಡಿಸಿ ರವಿಕುಮರ್ 2ನೇ ಬಾರಿ ಹೀಗೆ ಮಾತನಾಡ್ತಿದ್ದಾರೆ. ಈ ಹಿಂದೆ ಮಹಿಳಾ ಜಿಲ್ಲಾಧಿಕಾರಿಯೊಬ್ಬರನ್ನ ಪಾಕಿಸ್ತಾನದ ಸಹೋದರಿ ಅಂದಿದ್ರು. ನಾವು ಇಲ್ಲಿ ಡಿಸೈಡ್ ಮಾಡೋದಕ್ಕೆ ಬರೋದಿಲ್ಲ, ತನಿಖೆ ಆಗಲಿ, ಎಫ್‌ಐಆರ್ ಆಗಿ 24 ಗಂಟೆ ಕಳೆದಿಲ್ಲ ಆಗಲೇ ಕೋರ್ಟ್‌ಗೆ ಬಂದಿದ್ದಾರೆ. ವಿಕ್ಟಿಮ್ ಮುಖ್ಯ ಕಾರ್ಯದರ್ಶಿ ಅವರ ಹೇಳಿಕೆ ದಾಖಲಿಸಬೇಕಿದೆ. ಮಾಧ್ಯಮಗಳ ಹೇಳಿಕೆಯನ್ನೂ ದಾಖಲಾಸಲಾಗುತ್ತೆ, ಇದೊಂದು ಏಳು ವರ್ಷಗಳವರೆಗಿನ ಸಜೆಯುಳ್ಳ ಕೇಸ್ ಆಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿ ಇಲ್ಲಿ ರಕ್ಷಣೆ ಕೋರೋದು ಸರಿಯಿಲ್ಲ. ಐಎಎಸ್ ಅಧಿಕಾರಿಗಳು ಇವ್ರ ವಿರುದ್ಧ ಪ್ರತಿಭಟಿಸ್ತಿದ್ದಾರೆ ಅಂತ ವಾದ ಮಂಡಿಸಿದರು.

ರಾಜಕಾರಣಿಗಳು ಬಳಸುವ ಭಾಷೆ ಕೆಳಮಟ್ಟಕ್ಕಿಳಿದಿದೆ ಅಂತ ಅಭಿಪ್ರಾಯ ಪಟ್ಟ ನ್ಯಾಯಾಧೀಶರು, ಜುಲೈ 8ರ ವರೆಗೆ ಬಂಧಿಸದಂತೆ, ತನಿಖೆಗೆ ಸಹಕಾರ ನೀಡುವಂತೆ ಆದೇಶ ನೀಡಿದ್ರು. ಇನ್ನು ಸಂಜೆ ವೇಳೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್, ರವಿಕುಮಾರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದರು.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

35 mins ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

49 mins ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

51 mins ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

52 mins ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

55 mins ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

59 mins ago