ರಾಜ್ಯ

ಬಿಜೆಪಿ ʼಎಂಎಲ್‌ಸಿʼಗಳ ಅವಹೇಳನಕಾರಿ ಹೇಳಿಕೆ : ರಾಜ್ಯಪಾಲರಿಗೆ ದೂರು ನೀಡಿದ ಕಾಂಗ್ರೆಸ್‌ ನಿಯೋಗ

ಬೆಂಗಳೂರು : ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದು ನಿಂದಿಸಿರುವ ಎನ್‌ ರವಿಕುಮಾರ್‌ ಹಾಗೂ ಗ್ರಾಮೀಣಾಭಿವೃದ್ದಿ ಸಚಿವರಾದ ಪ್ರಿಯಾಂಕ ಖರ್ಗೆ ಅವರನ್ನು ನಾಯಿಗೆ ಹೋಲಿಸಿದ ಛಲವಾದಿ ನಾರಾಯಣಸ್ವಾಮಿ ಅವರ ವಿರುದ್ದ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕವಾಗಿ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ವಿಧಾನ ಪರಿಷತ್ತಿನ ಸದಸ್ಯರ ನಿಯೋಗ ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.

ವಿಧಾನಪರಿಷತ್‌ನ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು, ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರ ನೇತೃತ್ವದ ನಿಯೋಗ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ಸಲ್ಲಿಸಿತು.

ವಿಧಾನಪರಿಷತ್‌ ಆಡಳಿತ ಪಕ್ಷದ ನಾಯಕರಾದ ಎನ್‌ ಎಸ್‌ ಭೋಸರಾಜು ಅವರು ಮಾತನಾಡಿ, ವಿಧಾನಪರಿಷತ್‌ ಸದಸ್ಯರುಗಳಾದ ಎನ್‌ ರವಿಕುಮಾರ್‌ ಹಾಗೂ ಛಲವಾದಿ ನಾರಾಯಣ ಸ್ವಾಮಿ ಬೀದಿಯಲ್ಲಿ ಸಂವಿಧಾನ ವಿರೋಧಿಯಾಗಿ ಮಾತನಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಹೇಳಿಕೆ ನೀಡುವುದು ಸಮಂಜಸವಲ್ಲ. ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಎನ್ನುವ ಬಿಜೆಪಿ ಸದಸ್ಯರು ಸಮಾಜವನ್ನ ಹೊಡೆಯುವ ಕೆಲಸ ಮಾಡ್ತಿದ್ದಾರೆ. ಸಂವಿಧಾನ ವಿರೋಧಿ ಹೇಳಿಕೆಗಳನ್ನು ನೀಡುವುದನ್ನ ಹವ್ಯಾಸವನ್ನಾಗಿಸಿಕೊಂಡಿದ್ದಾರೆ. ದಲಿತ ಸಮುದಾಯವನ್ನು ಹೀಗೆಳೆಯುವಂತಹ ಹೇಳಿಕೆ ನೀಡಿರುವ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಉಚ್ಚಾಟನೆ ಮಾಡಬೇಕು. ಹಾಗೆಯೇ, ಅಧಿಕಾರಿಯ ಬಗ್ಗೆ ಹೇಳಿಕೆ ನೀಡಿರುವ ರವಿಕುಮಾರ್ ಅವರ ವಿರುದ್ದ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾದ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದೇವೆ ಎಂದರು.

ವಿಧಾನಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್‌ ಅವರು ಮಾತನಾಡಿ, ಕಾಂಗ್ರೆಸ್ ವಿಧಾನಪರಿಷತ್ತಿನ ಸದಸ್ಯರುಗಳ ನಿಯೋಗದಲ್ಲಿ ರಾಜ್ಯಪಾಲರನ್ನ ಭೇಟಿ ಮಾಡಿ ರವಿಕುಮಾರ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಎರಡು ದೂರು ಸಲ್ಲಿಸಿದ್ದೇವೆ. ವಿರೋದ ಪಕ್ಷದ ನಾಯಕರಾಗಿ ಬೇಜವಾಬ್ದಾರಿ ಹೇಳಿಕೆ ನೀಡಿರುವ ಛಲವಾದಿ ನಾರಾಯಣ್ ಸ್ವಾಮಿ ವಿರುದ್ದ ಕ್ರಮ ಕೈಗೊಳ್ಳಬೇಕು. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ದ ಛಲವಾದಿ ಅಸಂವಿಧಾನಿಕ ಪದ ಬಳಕೆ ಮಾಡಿದ್ದಾರೆ. ಐಎಎಸ್ ಅಧಿಕಾರಿಯನ್ನು ಪಾಕಿಸ್ತಾನದಿಂದ ಬಂದಿದ್ದಾರಾ? ಎಂದು ಹೇಳಿರುವ ರವಿಕುಮಾರ್‌ ಅವರನ್ನು ಅಮಾನತ್ತಗೊಳಿಸಬೇಕು. ಇವರಿಬ್ಬರೂ ಸಮಾಜದಲ್ಲಿ ತಪ್ಪು ಸಂದೇಶ ಕೊಡ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನಿಯೋಗದಲ್ಲಿ ವಿಧಾನಪರಿಷತ್‌ ಸದಸ್ಯರುಗಳಾದ ವಸಂತ್‌ಕುಮಾರ್‌, ಅನಿಲ್‌ ಕುಮಾರ್‌ ಎಂ.ಎಲ್‌. ಜಗದೇವ ಗುತ್ತೇದಾರ್‌, ಎಸ್‌ ರವಿ, ಡಿ.ಟಿ ಶ್ರೀನಿವಾಸ್‌, ದಿನೇಶ್‌ ಗೂಳಿಗೌಡ್‌, ಚನ್ನರಾಜ್‌ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ಪುಟ್ಟಣ್ಣ, ನಸೀರ್‌ ಅಹ್ಮದ್‌, ಗೋವಿಂದರಾಜು, ನಾಗರಾಜ್‌ ಯಾದವ್‌, ಮಂಜುನಾಥ್‌ ಭಂಡಾರಿ ನಿಯೋಗದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

7 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

7 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

7 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

7 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

8 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

9 hours ago