ರಾಜ್ಯ

ಕಾಂಗ್ರೆಸ್‌ ನಾಯಕರು ಕುರ್ಚಿ ಭದ್ರತೆಗಾಗಿ ಆಟ ಆಡ್ತಿದ್ದಾರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರು ಔತಣಕೂಟನಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ. ಅದು ಅವರ ಆಂತರಿಕ ವಿಚಾರ. ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಶಿಷ್ಯ ವೇತನ ಸಿಗುತ್ತಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಅನ್ನದಾತರಿಗೆ ಪರಿಹಾರ ಸಿಗುತ್ತಿಲ್ಲ. ಬಾಣಂತಿಯರ ಸಾವು ಹೆಚ್ಚಾಗುತ್ತಿದೆ. ಆದರೆ ಕಾಂಗ್ರೆಸ್‌ ನಾಯಕರಿಗೆ ಇವೆಲ್ಲಾ ಬೇಕಿಲ್ಲ. ಬರೀ ರಾಜಕಾರಣವೇ ಮುಖ್ಯವಾಗಿದೆ. ಯಾರು ಮುಂದಿನ ದಿನಗಳಲ್ಲಿ ಸಿಎಂ ಆಗಬೇಕು ಎಂಬುದೇ ಚರ್ಚೆಯಾಗುತ್ತಿದೆ. ಎಲ್ಲರೂ ಕೂಡ ಕುರ್ಚಿಯ ಭದ್ರತೆಗಾಗಿ ಆಟ ಆಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಸಂಕಷ್ಟ ದೂರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಶಾಸಕರು ಅಭಿವೃದ್ಧಿಗೆ ಅವಕಾಶ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕೊಡಲಿ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಹಣವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

35 mins ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

2 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

3 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

4 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

5 hours ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

6 hours ago