ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.
ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ಔತಣಕೂಟನಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ. ಅದು ಅವರ ಆಂತರಿಕ ವಿಚಾರ. ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಶಿಷ್ಯ ವೇತನ ಸಿಗುತ್ತಿಲ್ಲ ಎಂದು ದೂರಿದರು.
ರಾಜ್ಯದಲ್ಲಿ ಅನ್ನದಾತರಿಗೆ ಪರಿಹಾರ ಸಿಗುತ್ತಿಲ್ಲ. ಬಾಣಂತಿಯರ ಸಾವು ಹೆಚ್ಚಾಗುತ್ತಿದೆ. ಆದರೆ ಕಾಂಗ್ರೆಸ್ ನಾಯಕರಿಗೆ ಇವೆಲ್ಲಾ ಬೇಕಿಲ್ಲ. ಬರೀ ರಾಜಕಾರಣವೇ ಮುಖ್ಯವಾಗಿದೆ. ಯಾರು ಮುಂದಿನ ದಿನಗಳಲ್ಲಿ ಸಿಎಂ ಆಗಬೇಕು ಎಂಬುದೇ ಚರ್ಚೆಯಾಗುತ್ತಿದೆ. ಎಲ್ಲರೂ ಕೂಡ ಕುರ್ಚಿಯ ಭದ್ರತೆಗಾಗಿ ಆಟ ಆಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಸಂಕಷ್ಟ ದೂರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಶಾಸಕರು ಅಭಿವೃದ್ಧಿಗೆ ಅವಕಾಶ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕೊಡಲಿ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಹಣವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…