ಬಳ್ಳಾರಿ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಉಸ್ತುವಾರಿಗಳು ತಮಗೆ ಅವಮಾನ ಮಾಡಿದ್ದಾರೆಂದು ಆಕ್ರೋಶಗೊಂಡಿರುವ ಮಾಜಿ ಸಚಿವ ಬಿ. ಶ್ರೀಮುಲು ಅವರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಫೋನ್ ಕರೆ ಮಾಡಿ ಮನವೊಲಿಸಿದ್ದಾರೆ.
ಸಭೆಯಲ್ಲಿ ತಮಗಾದ ಅವಮಾನಕ್ಕೆ ನಾನು ಬೇಕಿದ್ದರೆ ಪಕ್ಷಕ್ಕೆ ರಾಜೀನಾಮೆ ಕೋಡುತ್ತೇನೆ ಈ ತರ ಅವಮಾನ ಸಹಿಸಿಕೊಳ್ಳಲಾರೆ ಎಂದು ಶ್ರೀರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು.
ಇದಕ್ಕೆ ಜೆ.ಪಿ ನಡ್ಡಾ ಶ್ರೀ ರಾಮುಲು ಅವರಿಗೆ ಫೋನ್ ಕರೆ ಮಾಡಿ ಆತುರದ ನಿರ್ಧಾರ ತೆಗೆದುಕೊಳ್ಳಬೇಡಿ. ದೆಹಲಿಗೆ ಬನ್ನಿ ಕೂತು ಮಾತನಾಡೋಣ. ಪಕ್ಷ ಬಿಡುವ ಬಗ್ಗೆ, ಪಕ್ಷದ ವಿರುದ್ಧ ಏನೂ ಮಾತನಾಡಬೇಡಿ ಎಂದು ಮನವೊಳಿಸುವ ಮೂಲಕ ಶ್ರೀರಾಮುಲು ಅವರ ನಿರ್ಧಾರಕ್ಕೆ ಸ್ವಲ್ಪ ಮಟ್ಟಿನ ಬ್ರೇಕ್ ಹಾಕಿದ್ದಾರೆ.
ಸಂಡೂರು ಉಪಚುನಾವಣೆ ಸೋಲಿಗೆ ತಮ್ಮನ್ನು ದೂಷಿಸಿದ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಶ್ ವಿರುದ್ಧ ಶ್ರೀ ರಾಮುಲು ಆಕ್ರೋಶ ವ್ಯಕ್ತಪಡಿಸಿದ್ದರು. ವಿಜಯೇಂದ್ರ ಮತ್ತು ಜನಾರ್ಧನ ರೆಡ್ಡಿ ಒಟ್ಟಿಗೆ ಸೇರಿ ನನ್ನನ್ನು ರಾಜಕೀಯವಾಗಿ ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಬೇಕಿದ್ದರೆ ಈಗಲೇ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಹೊರನಡೆಯುತ್ತೇನೆ ಎಂದು ಶ್ರೀ ರಾಮುಲು ಅಸಮಾಧಾನ ಹೊರಹಾಕಿದ್ದರು.
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…
ಕಲಬುರ್ಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದ ಪರಿಸ್ಥಿತಿಯು ಭಾರತದ ಭಾಸುಮತಿ ಅಕ್ಕಿ ರಫ್ತಿನ ಮೇಲೆ ತೀವ್ರ ಹೊಡೆತ ನೀಡಿದೆ. ದೆಹಲಿಯ ಗೋದಾಮುಗಳಲ್ಲಿ ಸುಮಾರು…